3:10 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕಪಿಲಾ ನದಿಯಲ್ಲಿ ಏರುತ್ತಿರುವ ನೀರಿನ ಮಟ್ಟ: ನಂಜನಗೂಡು ಪರಶುರಾಮ ದೇಗುಲ ಜಲಾವೃತ

17/07/2024, 15:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದರಿಂದ ಇಂದು ದಕ್ಷಿಣ ಕಾಶಿ ಪ್ರಸಿದ್ಧಿಯ ನಂಜನಗೂಡಿನಲ್ಲಿ ಕಪಿಲಾ ನದಿ ತೀರದಲ್ಲಿರುವ ಪರಶುರಾಮ ದೇವಾಲಯ ಜಲಾವೃತಗೊಂಡಿದೆ. ಇದರೊಂದಿಗೆ ಶ್ರೀ ನಂಜುಂಡಸ್ವಾಮಿ ದೇವಾಲಯದ ಸ್ನಾನಘಟ್ಟ, ಮುಡಿಕಟ್ಟೆ ಸಹಾ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿದೆ.
ಮೈದುಂಬಿ ಹರಿಯುತ್ತಿರುವ ಕಪಿಲಾ ನದಿಯನ್ನು ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯ ಜನರು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಸ್ನಾನಘಟ್ಟದ ಬಳಿ ಆಗಮಿಸುತ್ತಿದ್ದು , ನದಿ ಬಳಿಗೆ ಜನರು ತೆರಳದಂತೆ ಪೊಲೀಸರು ಧ್ವನಿ ವರ್ಧಕದ ಮೂಲಕ ಎಚ್ಚರಿಕೆ ನೀಡುತ್ತಿದ್ದರೂ ಆಗಮಿಸುತ್ತಿರುವ ಜನರನ್ನು ನಿಯಂತ್ರಿಸುವುದು ಪೊಲೀಸರಿಗೆ ಸವಾಲಾಗುತ್ತಿದೆ.


ಹದಿನಾರು ಕಾಲು ಮಂಟಪ, ಪರಶುರಾಮ ದೇವಾಲಯದ ಬಳಿ ನದಿ ದಡದಲ್ಲಿ ಹಗ್ಗ ಕಟ್ಟಿ, ಬ್ಯಾರಿಕೇಡ್ ಹಾಕಿ ಅಪಾಯದ ಕುರಿತು ಸಂದೇಶ ನೀಡುವ ಮೂಲಕ ಜನರು ನದಿ ನೀರಿನಲ್ಲಿ ಮುಂದೆ ಸಾಗದಂತೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕ್ಷಣದಲ್ಲಿ ನೀರಿನ ಹೊರ ಹರಿವು ಹೆಚ್ಚಳವಾಗುವ ಸಾಧ್ಯತೆಯಿರುವುದರಿಂದ ನಗರದ ಹಳ್ಳದಕೇರಿ ನಿವಾಸಿಗಳಿಗೆ ನಗರಸಭೆಯಿಂದ ಮುನ್ನೆಚ್ಚರಿಕೆ ನೀಡಲಾಗಿದ್ದು , ಜೊತೆಗೆ ತಾತ್ಕಾಲಿಕ ಗಂಜಿ ಕೇಂದ್ರವನ್ನು ತೆರೆಯಲು ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು