8:14 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ಮುಸ್ಲಿಮರೇ ಇಲ್ಲದ ಊರಲ್ಲಿ ಭಕ್ತಿ- ಸಂಭ್ರಮದಿಂದ ಮೊಹರಂ ಆಚರಣೆ: ಇಡೀ ರಾಜ್ಯದ ಗಮನ ಸೆಳೆದ ಮಸ್ಕಿಯ ಅಂತರಗಂಗೆ

17/07/2024, 23:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಅಂತರಗಂಗೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯದವರ ಒಬ್ಬರೂ ಇರದಿದ್ದರೂ ಇಂದು ಗ್ರಾಮದಲ್ಲಿ ಮೊಹರಂ ಆಚರಣೆ ಅದ್ದೂರಿಯಾಗಿ ನಡೆಯಿತು.
ಮೊಹರಂ ವಿಶೇಷ ಹಬ್ಬ .ಈ ಗ್ರಾಮದಲ್ಲಿ ಸತತವಾಗಿ ಮುಸ್ಲಿಂ ಇರದಿದ್ದರೂ ಬೇರೆ ಪಟ್ಟಣದಿಂದ ಮುಸ್ಲಿಮ್ಸ್ ಪೂಜೆ ಮಾಡುವರನ್ನು ಕರೆಸಿ ಭಾವೈಕ್ಯತೆ ಮೊಹರಂ ಹಬ್ಬ ಆಚರಣೆ ಮಾಡಲಾಯಿತು. ಯಾವುದೇ ಗಲಾಟಿ ಇಲ್ಲದೆ ಶಾಂತಿಯುತವಾಗಿ ನೆರವೇರಿತು.


ಭಕ್ತರು ತಮ್ಮ ಹರಕೆಗಳನ್ನು ತೀರಿಸುತ್ತಾ ಮೊಹರಂ ದೇವರಿಗೆ ಮಡಿ ಬಟ್ಟಿ ಹಾಗೂ ತಮ್ಮ ಹರಕೆಗಳನ್ನು ತೀರಿಸುತ್ತಾ. ಅಲೈ ಕುಣಿಯುತ್ತ ಔಷನ ಭವಿಷ್ಯನ ಬೆಂಬಲಾಯಿಮು ದೀನ್ ಎನ್ನುವ ವಾಕ್ಯದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು. ಬೆಳಗ್ಗೆ ದೇವರು ಹೇಳುವ ಸಂದರ್ಭದಲ್ಲಿ ಕುಂಬಾರ ಮನೆಗೆ ಹೋಗಿ ವಿಶೇಷ ಪೂಜೆಯೊಂದಿಗೆ ಮತ್ತೆ ಮಸೂದಿಗೆ ಬಂದು ಸಾಯಂಕಾಲ 5:00 ಗಂಟೆಗೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಂಭ್ರಮದ ಗ್ರಾಮೀಣ ಭಾಗದ ಅಂತರಗಂಗೆಯಲ್ಲಿ ಯಾವುದೇ ತಕರಾರು ಗಲಾಟೆ ಇಲ್ಲದೆ ಶಾಂತಿಯುತವಾಗಿ ಮೊಹರಂ ಆಚರಣೆ ಮಾಡಲಾಯಿತು. ಊರಿನ ಮುಖಂಡರು ಗ್ರಾಮಸ್ಥರು ಹಾಗೂ ಯುವಕರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು