1:27 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಜಾಜಿ ರಾಜು ಭರತನಾಟ್ಯ ರಂಗಪ್ರವೇಶ: ಬೆಂಗಳೂರಿನ ಜೆಎಸ್‌ಎಸ್‌ ಸಭಾಂಗಣದಲ್ಲಿ ಪ್ರಸ್ತುತಿ

24/08/2021, 08:28

ಬೆಂಗಳೂರು(reporterkarnataka.com): ಕಲಾಕ್ಷಿತಿ ಸ್ಕೂಲ್‌ ಆಫ್‌ ಫೈನ್‌ ಆರ್ಟ್‌ ವತಿಯಿಂದ ಜಯನಗರದ ಜೆಎಸ್‌ಎಸ್‌ ಸಭಾಂಗಣದ ಶಿವರಾತ್ರೀಶ್ವರ ಕೆಂದ್ರದಲ್ಲಿ ನಡೆದ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾ.ಎಂ.ಆರ್‌. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಭರತನಾಟ್ಯ ಪ್ರಸ್ತುತಪಡಿಸಿದರು. 


ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾನ್ಸ್‌ ಹಿಸ್ಟೋರಿಯನ್‌


ಕರುಣಾ ವಿಜಯೇಂದ್ರ, ನಟರಾಜ ನೃತ್ಯ ಶಾಲಾ ನಿರ್ದೇಶಕಿ ಗುರು ವಸುಂಧರಾ ಸಂಪತ್‌ ಕುಮಾರ್‌, ಕಂದಾಯ ಸಚಿವ ಆರ್‌. ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು. 


ಜಾಜಿ ರಾಜು ಅವರು ಸುನಿತಾ ಮತ್ತು ಮೋಹನ್‌ ರಾಜು ಅವರ ಮಗಳು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ಬಿ. ಬೋರೇಗೌಡ ಅವರ ಮೊಮ್ಮಗಳು. ಸ್ವತಃ ಭರತನಾಟ್ಯ ಕಲಾವಿದೆ ಆಗಿರುವ ತಮ್ಮ ತಾಯಿ ಸುನಿತಾ ಅವರ ಮಾರ್ಗದರ್ಶನದಲ್ಲಿ ಸಣ್ಣ ವಯಸ್ಸಿನಿಂದಲೇ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು