11:43 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಜಾಜಿ ರಾಜು ಭರತನಾಟ್ಯ ರಂಗಪ್ರವೇಶ: ಬೆಂಗಳೂರಿನ ಜೆಎಸ್‌ಎಸ್‌ ಸಭಾಂಗಣದಲ್ಲಿ ಪ್ರಸ್ತುತಿ

24/08/2021, 08:28

ಬೆಂಗಳೂರು(reporterkarnataka.com): ಕಲಾಕ್ಷಿತಿ ಸ್ಕೂಲ್‌ ಆಫ್‌ ಫೈನ್‌ ಆರ್ಟ್‌ ವತಿಯಿಂದ ಜಯನಗರದ ಜೆಎಸ್‌ಎಸ್‌ ಸಭಾಂಗಣದ ಶಿವರಾತ್ರೀಶ್ವರ ಕೆಂದ್ರದಲ್ಲಿ ನಡೆದ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾ.ಎಂ.ಆರ್‌. ಕೃಷ್ಣಮೂರ್ತಿ ಅವರ ಶಿಷ್ಯೆ ಜಾಜಿ ರಾಜು ಭರತನಾಟ್ಯ ಪ್ರಸ್ತುತಪಡಿಸಿದರು. 


ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಸಾನಿಧ್ಯದಲ್ಲಿ ನಡೆದ ರಂಗಪ್ರವೇಶ ಕಾರ್ಯಕ್ರಮದಲ್ಲಿ ಡಾನ್ಸ್‌ ಹಿಸ್ಟೋರಿಯನ್‌


ಕರುಣಾ ವಿಜಯೇಂದ್ರ, ನಟರಾಜ ನೃತ್ಯ ಶಾಲಾ ನಿರ್ದೇಶಕಿ ಗುರು ವಸುಂಧರಾ ಸಂಪತ್‌ ಕುಮಾರ್‌, ಕಂದಾಯ ಸಚಿವ ಆರ್‌. ಅಶೋಕ್‌, ಸಂಸದ ತೇಜಸ್ವಿ ಸೂರ್ಯ, ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಮುಖ್ಯ ಅತಿಥಿಗಳಾಗಿ  ಭಾಗವಹಿಸಿದ್ದರು. 


ಜಾಜಿ ರಾಜು ಅವರು ಸುನಿತಾ ಮತ್ತು ಮೋಹನ್‌ ರಾಜು ಅವರ ಮಗಳು. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಾಟಕಕಾರ ಬಿ. ಬೋರೇಗೌಡ ಅವರ ಮೊಮ್ಮಗಳು. ಸ್ವತಃ ಭರತನಾಟ್ಯ ಕಲಾವಿದೆ ಆಗಿರುವ ತಮ್ಮ ತಾಯಿ ಸುನಿತಾ ಅವರ ಮಾರ್ಗದರ್ಶನದಲ್ಲಿ ಸಣ್ಣ ವಯಸ್ಸಿನಿಂದಲೇ ಭರತನಾಟ್ಯವನ್ನು ಅಭ್ಯಸಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು