5:47 AM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ಹಳ್ಳೂರ: ಹಿಂದೂ -ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

17/07/2024, 23:41

ಸಂತೋಷ್ ಬೆಳಗಾವಿ

info.reporterkarnataka@gmail.com

ಮೂಡಲಗಿ ತಾಲೂಕಿನ ಹಳ್ಳೂರದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬುಧವಾರದಂದು ಬೇಧ ಭಾವ ಇಲ್ಲದೆ ಗ್ರಾಮಸ್ಥರೆಲ್ಲರು ಸೇರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಪಿರಸಾಭ ದರ್ಗಾ ದಿಂದ ದೇವರ ಡೊಲಿಯನ್ನು ಹೊರಗೆ ತಂದರು ಭಕ್ತರು ಲಾಲ್ ಸಾಬ್ ಕಿ ದೋಸ್ತ್ರಾ ದಿನ್ ಅನ್ನುತ್ತಾ ದೇವರ ಡೋಲಿಯ ಮೇಲೆ ಕಾರಿಕ್, ಬೆಂಡು ಬತ್ತಾಸು ಬಿಸ್ಕಿಟ್ಟ ಹಾರಿಸಿ ಹರಕೆ ತೀರಿಸಿದರು. ಗ್ರಾಮದ ಯುವಕರು ಖತಾಲಗಳ ಅನೇಕ ತಂಡದವರು ಹೆಜ್ಜೆ ಹಾಕುತ್ತಾ, ಕರಬಲ್ ಆಡುತ್ತಾ ಹೆಜ್ಜೆ ಕುಣಿತ ಲೇಜಿಮ್ ಕುಣಿತ, ಹಗ್ಗದ ಆಟ, ಬಾರಕೋಲ ಬಡಿತ, ತಾಳ ಬಡಿತ ಹೀಗೆ ಬೇರೆ ಬೇರೆ ಮನರಂಜನೆಯನ್ನು ಪ್ರದರ್ಶಿಸಿದರು. ಭವ್ಯವಾದ ಮೆರವಣಿಗೆ ನಡೆಯಿತು. ನಂತರ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ದೇವರು ಎಬ್ಬಿಸಿ ವರ್ಷದ ಮಳೆ ಬೆಳೆ ಒಳ್ಳೇದು, ಕೆಟ್ಟದ್ದು ಹೇಳುವ ನುಡಿಗಳು ನಡೆದವು. ನಂತರ ದೇವರುಗಳನ್ನು ಬಾವಿಗೆ ಕಳುಹಿಸುವುದರ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಮೊಹರಂ ಹಬ್ಬದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಹಾಗೂ ಹಿಂದೂ – ಮುಸ್ಲಿಂ ಸಮಾಜದ ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು