2:49 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಹಳ್ಳೂರ: ಹಿಂದೂ -ಮುಸ್ಲಿಂ ಭಾವೈಕ್ಯತೆಯ ಮೊಹರಂ ಹಬ್ಬ ಆಚರಣೆ

17/07/2024, 23:41

ಸಂತೋಷ್ ಬೆಳಗಾವಿ

info.reporterkarnataka@gmail.com

ಮೂಡಲಗಿ ತಾಲೂಕಿನ ಹಳ್ಳೂರದಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆಯ ಪ್ರತೀಕವಾದ ಮೊಹರಂ ಹಬ್ಬವನ್ನು ಬುಧವಾರದಂದು ಬೇಧ ಭಾವ ಇಲ್ಲದೆ ಗ್ರಾಮಸ್ಥರೆಲ್ಲರು ಸೇರಿ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಪಿರಸಾಭ ದರ್ಗಾ ದಿಂದ ದೇವರ ಡೊಲಿಯನ್ನು ಹೊರಗೆ ತಂದರು ಭಕ್ತರು ಲಾಲ್ ಸಾಬ್ ಕಿ ದೋಸ್ತ್ರಾ ದಿನ್ ಅನ್ನುತ್ತಾ ದೇವರ ಡೋಲಿಯ ಮೇಲೆ ಕಾರಿಕ್, ಬೆಂಡು ಬತ್ತಾಸು ಬಿಸ್ಕಿಟ್ಟ ಹಾರಿಸಿ ಹರಕೆ ತೀರಿಸಿದರು. ಗ್ರಾಮದ ಯುವಕರು ಖತಾಲಗಳ ಅನೇಕ ತಂಡದವರು ಹೆಜ್ಜೆ ಹಾಕುತ್ತಾ, ಕರಬಲ್ ಆಡುತ್ತಾ ಹೆಜ್ಜೆ ಕುಣಿತ ಲೇಜಿಮ್ ಕುಣಿತ, ಹಗ್ಗದ ಆಟ, ಬಾರಕೋಲ ಬಡಿತ, ತಾಳ ಬಡಿತ ಹೀಗೆ ಬೇರೆ ಬೇರೆ ಮನರಂಜನೆಯನ್ನು ಪ್ರದರ್ಶಿಸಿದರು. ಭವ್ಯವಾದ ಮೆರವಣಿಗೆ ನಡೆಯಿತು. ನಂತರ ಶ್ರೀ ಮಹಾಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ದೇವರು ಎಬ್ಬಿಸಿ ವರ್ಷದ ಮಳೆ ಬೆಳೆ ಒಳ್ಳೇದು, ಕೆಟ್ಟದ್ದು ಹೇಳುವ ನುಡಿಗಳು ನಡೆದವು. ನಂತರ ದೇವರುಗಳನ್ನು ಬಾವಿಗೆ ಕಳುಹಿಸುವುದರ ಮೂಲಕ ಭಕ್ತಿಯನ್ನು ಸಮರ್ಪಿಸಿದರು. ಮೊಹರಂ ಹಬ್ಬದ ಆಚರಣೆಯಲ್ಲಿ ಸಹಸ್ರಾರು ಭಕ್ತರು ಹಾಗೂ ಹಿಂದೂ – ಮುಸ್ಲಿಂ ಸಮಾಜದ ಪ್ರಮುಖರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು