6:55 AM Sunday16 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಕಣ್ಣೀರು ಬರುವ ದೃಶ್ಯ: ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ಕೊಚ್ಚಿ ಹೋದ ರಾಸು; ಹೆಬ್ಬಾಳೆ ಸೇತುವೆ ಮೇಲೆ ನಡೆದ ದುರ್ಘಟನೆ

18/07/2024, 18:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಈ ದೃಶ್ಯ ನೋಡುದ್ರೆ ನಿಮ್ಮ ಕಣ್ಣಲ್ಲಿ ನೀರು ಬರುತ್ತೆ. ಮಲೆನಾಡ ರಣ ಮಳೆಯ ಭೀಕರತೆಗೆ ಈ ದೃಶ್ಯವೇ ಸಾಕ್ಷಿ.ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲಿಂದ ದನವೊಂದು ನೀರಿನಲ್ಲಿ
ಕೊಚ್ಚಿ ಹೋಗಿದೆ.
ಮಲೆನಾಡಲ್ಲಿ ಮಳೆಯ ರುದ್ರನರ್ತನಕ್ಕೆ ಜನರ ಜೊತೆ ಜಾನುವಾರುಗಳಿಗೆ ಬಹಳಷ್ಟು ತೊಂದರೆಯಾಗಿದೆ.
ಭದ್ರಾ ನದಿಯ ಹೆಬ್ಬಾಳೆ ಸೇತುವೆ ಮೇಲೆ ಒಂದು ದಡದಿಂದ ಮತ್ತೊಂದು ದಡಕ್ಕೆ ದನ ಹೋಗುವಾಗ ಈ ದುರಂತ ನಡೆದಿದೆ.
ದಡ ತುಸು ದೂರದಲ್ಲೇ ಇದ್ದಾಗ ದನ ನದಿಗೆ ಬಿದ್ದು ಕೊಚ್ಚಿ ಹೋಗಿದೆ. ಹೆಬ್ಬಾಳೆ ಸೇತುವೆ ಮೇಲೆ 2-3 ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಕಳಸ ತಾಲೂಕಿನಿಂದ ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಇದುವಾಗಿದೆ. ಜನರ ಕಣ್ಣೆದುರೇ ಭದ್ರೆಯ ಒಡಲಲ್ಲಿ ದನ ಕೊಚ್ಚಿ ಹೋಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು