7:45 PM Friday18 - September 2026
ಬ್ರೇಕಿಂಗ್ ನ್ಯೂಸ್
ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:…

ಇತ್ತೀಚಿನ ಸುದ್ದಿ

ಆಸ್ತಿ ವಿವಾದ: ಮಚ್ಚಿನಿಂದ ಹೊಡೆದು ಮಾವನಿಂದಲೇ ಸೊಸೆಯ ಭೀಕರ ಹತ್ಯೆ; ಇನ್ನಿಬ್ಬರ ಮೇಲೂ ಹಲ್ಲೆ

18/07/2024, 21:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಾವನಿಂದಲೇ ಸೊಸೆಯ ಹತ್ಯೆಯಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಹಾಲುಗೊಂಡನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಈರಮ್ಮ(45) ಹತ್ಯೆಯಾದ ಮಹಿಳೆ.ಹಾಲಗೊಂಡನಹಳ್ಳಿ ಸಮೀಪದ ಕರೀಕಲ್ಲು ಗೊಲ್ಲರಹಟ್ಟಿಯಲ್ಲಿ ಈರಮ್ಮ ವಾಸವಾಗಿದ್ದರು. ಪತಿ ಗೋವಿಂದಪ್ಪ ಎಂಬುವವರು ಎಂಟು ವರ್ಷಗಳ ಹಿಂದೆಯೇ ಸಾವನ್ನಪ್ಪಿರುತ್ತಾರೆ. ಆದ್ದರಿಂದ ತನ್ನ ಪತಿಯ ಜಮೀನಿಗಾಗಿ ಈರಮ್ಮ ಅವರ ಪತಿಯ ಅಣ್ಣ ಚಂದ್ರಪ್ಪನ ನಡುವೆ ಕಲಹವಿತ್ತು. ಈ ವಿಚಾರವಾಗಿ ಆಸ್ತಿ ವಿವಾದದ ಪ್ರಕರಣ ಕೋರ್ಟ್ ನಲ್ಲಿತ್ತು. ಇದರ ತೀರ್ಪು ಗುರುವಾರ ಪ್ರಕಟವಾಗುವುದಿತ್ತು.
ಇದರ ನಡುವೆ ಇಂದು ಬೆಳಿಗ್ಗೆ ಚಂದ್ರಪ್ಪ ಮತ್ತು ಮಗ ಗಂಗಾಧರ್ ಸೂರನಹಳ್ಳಿಯಿಂದ ಬಂದು ಈರಮ್ಮನ್ನನ್ನು ಹೊರಗೆ ಕರೆದು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಹಲ್ಲೆಯನ್ನು ತಡೆಯಲು ಬಂದ ಈರಮ್ಮನವರ ತಾಯಿ ಮತ್ತು ಸಹೋದರಿ ಮಮತ ಅವರ ಮೇಲೂ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಈರಮ್ಮ ಸಾವನ್ನಪ್ಪಿದ್ದು, ಗಾಯಗೊಂಡ ಇಬ್ಬರನ್ನೂ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈರಮ್ಮನನ್ನು ಹತ್ಯೆ ಮಾಡಿದ ನಂತರ ಮಚ್ಚು ಹಿಡಿದುಕೊಂಡು ಓಡಾಡುತ್ತಿದ್ದ ಚಂದ್ರಪ್ಪನನ್ನು ಊರಿನ ಜನರು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ವಿಷಯ ತಿಳಿಸಿ ಚಂದ್ರಪ್ಪ ಹಾಗೂ ಮಗ ಗಂಗಾಧರನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪರುಶುರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಎಎಸ್ಪಿ ಜೆ.ಕುಮಾರಸ್ವಾಮಿ, ಚಳ್ಳಕೆರೆ ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪಿಐ, ಆರ್.ಎಫ್. ದೇಸಾಯಿ, ಪಿಎಸ್ ಐ ಬಸವರಾಜ್ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು