12:10 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಆಸ್ತಿ ವಿವಾದ: ಮಚ್ಚಿನಿಂದ ಹೊಡೆದು ಮಾವನಿಂದಲೇ ಸೊಸೆಯ ಭೀಕರ ಹತ್ಯೆ; ಇನ್ನಿಬ್ಬರ ಮೇಲೂ ಹಲ್ಲೆ

18/07/2024, 21:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ಮಾವನಿಂದಲೇ ಸೊಸೆಯ ಹತ್ಯೆಯಾಗಿರುವ ಘಟನೆ ಚಳ್ಳಕೆರೆ ತಾಲ್ಲೂಕಿನ ಹಾಲುಗೊಂಡನಹಳ್ಳಿ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಈರಮ್ಮ(45) ಹತ್ಯೆಯಾದ ಮಹಿಳೆ.ಹಾಲಗೊಂಡನಹಳ್ಳಿ ಸಮೀಪದ ಕರೀಕಲ್ಲು ಗೊಲ್ಲರಹಟ್ಟಿಯಲ್ಲಿ ಈರಮ್ಮ ವಾಸವಾಗಿದ್ದರು. ಪತಿ ಗೋವಿಂದಪ್ಪ ಎಂಬುವವರು ಎಂಟು ವರ್ಷಗಳ ಹಿಂದೆಯೇ ಸಾವನ್ನಪ್ಪಿರುತ್ತಾರೆ. ಆದ್ದರಿಂದ ತನ್ನ ಪತಿಯ ಜಮೀನಿಗಾಗಿ ಈರಮ್ಮ ಅವರ ಪತಿಯ ಅಣ್ಣ ಚಂದ್ರಪ್ಪನ ನಡುವೆ ಕಲಹವಿತ್ತು. ಈ ವಿಚಾರವಾಗಿ ಆಸ್ತಿ ವಿವಾದದ ಪ್ರಕರಣ ಕೋರ್ಟ್ ನಲ್ಲಿತ್ತು. ಇದರ ತೀರ್ಪು ಗುರುವಾರ ಪ್ರಕಟವಾಗುವುದಿತ್ತು.
ಇದರ ನಡುವೆ ಇಂದು ಬೆಳಿಗ್ಗೆ ಚಂದ್ರಪ್ಪ ಮತ್ತು ಮಗ ಗಂಗಾಧರ್ ಸೂರನಹಳ್ಳಿಯಿಂದ ಬಂದು ಈರಮ್ಮನ್ನನ್ನು ಹೊರಗೆ ಕರೆದು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಹಲ್ಲೆಯನ್ನು ತಡೆಯಲು ಬಂದ ಈರಮ್ಮನವರ ತಾಯಿ ಮತ್ತು ಸಹೋದರಿ ಮಮತ ಅವರ ಮೇಲೂ ಹಲ್ಲೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಈರಮ್ಮ ಸಾವನ್ನಪ್ಪಿದ್ದು, ಗಾಯಗೊಂಡ ಇಬ್ಬರನ್ನೂ ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈರಮ್ಮನನ್ನು ಹತ್ಯೆ ಮಾಡಿದ ನಂತರ ಮಚ್ಚು ಹಿಡಿದುಕೊಂಡು ಓಡಾಡುತ್ತಿದ್ದ ಚಂದ್ರಪ್ಪನನ್ನು ಊರಿನ ಜನರು ಕಂಬಕ್ಕೆ ಕಟ್ಟಿ ಹಾಕಿ ಪೊಲೀಸರಿಗೆ ವಿಷಯ ತಿಳಿಸಿ ಚಂದ್ರಪ್ಪ ಹಾಗೂ ಮಗ ಗಂಗಾಧರನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪರುಶುರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಎಎಸ್ಪಿ ಜೆ.ಕುಮಾರಸ್ವಾಮಿ, ಚಳ್ಳಕೆರೆ ಡಿವೈಎಸ್ಪಿ ಟಿ.ಬಿ.ರಾಜಣ್ಣ, ಪಿಐ, ಆರ್.ಎಫ್. ದೇಸಾಯಿ, ಪಿಎಸ್ ಐ ಬಸವರಾಜ್ ಮತ್ತು ಸಿಬ್ಬಂದಿ ವರ್ಗದವರು ಭೇಟಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು