3:29 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ ಆಯುಕ್ತರ ಮನೆ, ಕಚೇರಿ ಸೇರಿದಂತೆ ರಾಜ್ಯದ 55 ಕಡೆಗಳಲ್ಲಿ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ

19/07/2024, 11:52

ಬೆಂಗಳೂರು(reporterkarnataka.com):
ರಾಜ್ಯ ಲೋಕಾಯುಕ್ತರು ಶುಕ್ರವಾರ ಮುಂಜಾನೆ ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರ ನಿವಾಸ, ಕಚೇರಿ ಸೇರಿದಂತೆ ರಾಜ್ಯದ 6 ಜಿಲ್ಲೆಗಳ 55 ಕಡೆಗಳಿಗೆ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.
ಒಂದು ವಾರದ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ 2ನೇ ದೊಡ್ಡ ದಾಳಿ ಇದಾಗಿದೆ. ಒಂಬುಡ್ಸ್‌ಮನ್‌ನ ಪೊಲೀಸ್ ವಿಭಾಗದ ಸುಮಾರು 85 ಅಧಿಕಾರಿಗಳು, 12 ಸರಕಾರಿ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.
ದಾಳಿ ನಡೆದ ಅಧಿಕಾರಿಗಳಲ್ಲಿ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ರಮೇಶ್ ಕುಮಾರ್ ಮತ್ತು ಬೆಂಗಳೂರು ವಿಭಾಗದ ಕಾನೂನು ಮಾಪನಶಾಸ್ತ್ರದ ಉಪ ನಿಯಂತ್ರಕ ಅಥರ್ ಅಲಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ
ಸಿ ಎಲ್ ಆನಂದ್ ಸೇರಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರ ಮನೆ, ಕಚೇರಿಗಳ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಆನಂದ್ ಅವರ ಮನೆಗೆ ಬೆಂಗಳೂರಿನ ಲೋಕಾಯುಕ್ತ ಪೊಲೀಸರ ತಂಡ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಮೂಲತಃ ಮಂಡ್ಯದವರಾಗಿರುವ ಆನಂದ್ ಇಂಡಿಯಾ ಆರ್ಮಿಯಲ್ಲಿ ಸುಮಾರು 15 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ರಾಜ್ಯ ಸರಕಾರ ಆನಂದ ಅವರನ್ನು ಇತ್ತೀಚೆಗೆ ವರ್ಗಾವಣೆಗೊಳಿಸಿ ಬಳಿಕ ಆದೇಶ ತಡೆಹಿಡಿದಿತ್ತು.
ಜುಲೈ 11ರಂದು ಲೋಕಾಯುಕ್ತರು 9 ಜಿಲ್ಲೆಗಳಲ್ಲಿ 11 ಅಧಿಕಾರಿಗಳ ಮೇಲೆ ದಾಳಿ ನಡೆಸಿ 45.1 ಕೋಟಿ ರೂಪಾಯಿ ಅಕ್ರಮ ಆಸ್ತಿಯನ್ನು ಪತ್ತೆ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು