12:18 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕಪಿಲಾ ನದಿ ಪ್ರವಾಹ: ಶ್ರೀ ಮಲ್ಲನ ಮೂಲೆ ಮಠದ ಬಳಿ ರಸ್ತೆಗೆ ನುಗ್ಗಿದ ನೀರು; ನಂಜನಗೂಡು-ಮೈಸೂರು ಹೆದ್ದಾರಿ ಬಂದ್

19/07/2024, 14:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿ ಪ್ರವಾಹದಿಂದ ನಂಜನಗೂಡು-ಮೈಸೂರು ಹೆದ್ದಾರಿ ಬಂದ್ ಆಗಿದೆ.
ಕೇರಳದ ವಯನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಿದೆ. ಇದರಿಂದಾಗಿ ಕಪಿಲ ನದಿ ತೀರದಲ್ಲಿ ಹಾದು ಹೋಗಿರುವ ಮೈಸೂರು- ನಂಜನಗೂಡು ಹೆದ್ದಾರಿಯಲ್ಲಿ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ಬಳಿ ನದಿಯ ಪ್ರವಾಹ ರಸ್ತೆಗೆ ಹರಿದು ಬಂದು ರಸ್ತೆ ಸಂಪೂರ್ಣ ಮುಳುಗಿಹೋಗಿದೆ. ಇದರ ಪರಿಣಾಮ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸಲು ಆಗದೆ ರಸ್ತೆಯನ್ನು ಬಂದ್ ಮಾಡಲಾಗಿದೆ.


ಈ ಹಿನ್ನಲೆ ಮೈಸೂರು ಚಾಮರಾಜನಗರ ನಂಜನಗೂಡು ಗುಂಡ್ಲುಪೇಟೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ರಾಜ್ಯದ ವಾಹನ ಸವಾರರಿಗೆ ತುಂಬಾ ತೊಂದರೆಯಾಗಿದೆ.
ನಂಜನಗೂಡು- ಮೈಸೂರು ಹೆದ್ದಾರಿ ಬಂದ್ ಮಾಡಿ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದಾಗಿ ಕೇವಲ ಒಂದು ಕಿಲೋಮೀಟರ್ ರಸ್ತೆಗೆ ಬದಲಾಗಿ ಸುಮಾರು ಹದಿನೈದರಿಂದ ಇಪ್ಪತ್ತು ಕಿಲೋಮೀಟರ್ ರಸ್ತೆ ಬಳಸುವಂತಾಗಿದೆಯಲ್ಲದೆ. ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು