5:44 AM Thursday4 - December 2025
ಬ್ರೇಕಿಂಗ್ ನ್ಯೂಸ್
ಸಿಎಂ ಸಿದ್ದರಾಮಯ್ಯ – ವೇಣುಗೋಪಾಲ್‌ ಭೇಟಿ ಬೆನ್ನಲ್ಲೇ ದೆಹಲಿಗೆ ಹಾರಿದ ಡಿಸಿಎಂ ಡಿ.ಕೆ.… ಅಧಿಕಾರ ಹಸ್ತಾಂತರ ಚರ್ಚೆ: ಮುಖ್ಯಮಂತ್ರಿ ಸಿದ್ದರಾಮಯ್ಯ -‌ ಕೆ.ಸಿ. ವೇಣುಗೋಪಾಲ್ ಭೇಟಿ; ಮಾತುಕತೆ ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು…

ಇತ್ತೀಚಿನ ಸುದ್ದಿ

ಕಪಿಲಾ ನದಿ ಪ್ರವಾಹ: ಶ್ರೀ ಮಲ್ಲನ ಮೂಲೆ ಮಠದ ಬಳಿ ರಸ್ತೆಗೆ ನುಗ್ಗಿದ ನೀರು; ನಂಜನಗೂಡು-ಮೈಸೂರು ಹೆದ್ದಾರಿ ಬಂದ್

19/07/2024, 14:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿ ಪ್ರವಾಹದಿಂದ ನಂಜನಗೂಡು-ಮೈಸೂರು ಹೆದ್ದಾರಿ ಬಂದ್ ಆಗಿದೆ.
ಕೇರಳದ ವಯನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಿದೆ. ಇದರಿಂದಾಗಿ ಕಪಿಲ ನದಿ ತೀರದಲ್ಲಿ ಹಾದು ಹೋಗಿರುವ ಮೈಸೂರು- ನಂಜನಗೂಡು ಹೆದ್ದಾರಿಯಲ್ಲಿ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ಬಳಿ ನದಿಯ ಪ್ರವಾಹ ರಸ್ತೆಗೆ ಹರಿದು ಬಂದು ರಸ್ತೆ ಸಂಪೂರ್ಣ ಮುಳುಗಿಹೋಗಿದೆ. ಇದರ ಪರಿಣಾಮ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸಲು ಆಗದೆ ರಸ್ತೆಯನ್ನು ಬಂದ್ ಮಾಡಲಾಗಿದೆ.


ಈ ಹಿನ್ನಲೆ ಮೈಸೂರು ಚಾಮರಾಜನಗರ ನಂಜನಗೂಡು ಗುಂಡ್ಲುಪೇಟೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ರಾಜ್ಯದ ವಾಹನ ಸವಾರರಿಗೆ ತುಂಬಾ ತೊಂದರೆಯಾಗಿದೆ.
ನಂಜನಗೂಡು- ಮೈಸೂರು ಹೆದ್ದಾರಿ ಬಂದ್ ಮಾಡಿ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದಾಗಿ ಕೇವಲ ಒಂದು ಕಿಲೋಮೀಟರ್ ರಸ್ತೆಗೆ ಬದಲಾಗಿ ಸುಮಾರು ಹದಿನೈದರಿಂದ ಇಪ್ಪತ್ತು ಕಿಲೋಮೀಟರ್ ರಸ್ತೆ ಬಳಸುವಂತಾಗಿದೆಯಲ್ಲದೆ. ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು