8:55 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಕಪಿಲಾ ನದಿ ಪ್ರವಾಹ: ಶ್ರೀ ಮಲ್ಲನ ಮೂಲೆ ಮಠದ ಬಳಿ ರಸ್ತೆಗೆ ನುಗ್ಗಿದ ನೀರು; ನಂಜನಗೂಡು-ಮೈಸೂರು ಹೆದ್ದಾರಿ ಬಂದ್

19/07/2024, 14:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಪಿಲಾ ನದಿ ಪ್ರವಾಹದಿಂದ ನಂಜನಗೂಡು-ಮೈಸೂರು ಹೆದ್ದಾರಿ ಬಂದ್ ಆಗಿದೆ.
ಕೇರಳದ ವಯನಾಡು ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಪಿಲಾ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಿದೆ. ಇದರಿಂದಾಗಿ ಕಪಿಲ ನದಿ ತೀರದಲ್ಲಿ ಹಾದು ಹೋಗಿರುವ ಮೈಸೂರು- ನಂಜನಗೂಡು ಹೆದ್ದಾರಿಯಲ್ಲಿ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠದ ಬಳಿ ನದಿಯ ಪ್ರವಾಹ ರಸ್ತೆಗೆ ಹರಿದು ಬಂದು ರಸ್ತೆ ಸಂಪೂರ್ಣ ಮುಳುಗಿಹೋಗಿದೆ. ಇದರ ಪರಿಣಾಮ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸಲು ಆಗದೆ ರಸ್ತೆಯನ್ನು ಬಂದ್ ಮಾಡಲಾಗಿದೆ.


ಈ ಹಿನ್ನಲೆ ಮೈಸೂರು ಚಾಮರಾಜನಗರ ನಂಜನಗೂಡು ಗುಂಡ್ಲುಪೇಟೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ರಾಜ್ಯದ ವಾಹನ ಸವಾರರಿಗೆ ತುಂಬಾ ತೊಂದರೆಯಾಗಿದೆ.
ನಂಜನಗೂಡು- ಮೈಸೂರು ಹೆದ್ದಾರಿ ಬಂದ್ ಮಾಡಿ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದಾಗಿ ಕೇವಲ ಒಂದು ಕಿಲೋಮೀಟರ್ ರಸ್ತೆಗೆ ಬದಲಾಗಿ ಸುಮಾರು ಹದಿನೈದರಿಂದ ಇಪ್ಪತ್ತು ಕಿಲೋಮೀಟರ್ ರಸ್ತೆ ಬಳಸುವಂತಾಗಿದೆಯಲ್ಲದೆ. ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು