4:36 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ

19/07/2024, 21:05

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇರಳದ ವಯನಾಡು ಹಾಗೂ ಕಪಿಲಾ ನದಿ ಪ್ರಾಂತ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಕಬಿನಿ ಜಲಾಶಯದಿಂದ ಸುಮಾರು 60 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗಿದೆ. ಈ ಹಿನ್ನೆಲೆ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿಯ ಪ್ರವಾಹ ದೇವಾಲಯದ ಸಮೀಪದವರೆಗೂ ಹರಿದು ಬಂದಿದೆ.
ದೇವಾಲಯದ ಸುತ್ತಮುತ್ತ ತಗ್ಗು ಪ್ರದೇಶಗಳಿಗೆ ನುಗ್ಗಿರುವ ನೀರು ಒಂದು ರೀತಿ ಜಲ ದಿಗ್ಬಂಧನ ಹಾಕಿದಂತಿದೆ.


ಪ್ರವಾಹದಿಂದಾಗಿ ಐತಿಹಾಸಿಕ ಹಳೆ ಸೇತುವೆ, ಹದಿನಾರುಕಾಲು ಮಂಟಪ, ಪರಶುರಾಮ ದೇವಾಲಯ, ಅಯ್ಯಪ್ಪ ಸ್ವಾಮಿ, ದೇವಾಲಯ ಸುಕ್ಷೇತ್ರ ಶ್ರೀ ಮಲ್ಲನ ಮೂಲೆ ಮಠ, ಲಿಂಗಾಭಟರ ಗುಡಿ, ಚಾಮುಂಡೇಶ್ವರಿ ದೇವಾಲಯ, ಸೇರಿದಂತೆ ಪಟ್ಟಣದ ಹಳ್ಳದ ಕೇರಿ, ತೋಪಿನ ಬೀದಿಗಳಲ್ಲಿ ಹಲವಾರು ಮನೆಗಳು ಜಲಾವೃತಗೊಂಡಿವೆ. ಇದರಿಂದ ಎಚ್ಚೆತ್ತ ಜಿಲ್ಲಾ ಮತ್ತು ತಾಲೂಕ ಆಡಳಿತ ಮುಂಜಾಗ್ರತಾ ಕ್ರಮ ಕೈಗೊಂಡು ತಗ್ಗು ಪ್ರದೇಶದ ಹಾಗೂ ಮುಳುಗಡೆಯಾದ ಮನೆಗಳ ಸಂತ್ರಸ್ತರಿಗೆ ಕಾಳಜಿ ಕೇಂದ್ರಗಳನ್ನು ತೆರೆದು ಆಶ್ರಯ ನೀಡಲಾಗಿದೆ.
ನಂಜನಗೂಡಿನ ನೆರೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಶಾಸಕ ಹರ್ಷವರ್ಧನ್ ಹಾಗೂ ತಹಶೀಲ್ದಾರ್ ಶಿವಕುಮಾರ್ ಕಾಸನೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಳೆಯು ಹೀಗೆ ಮುಂದುವರೆದರೆ ಇನ್ನೂ ಅಪಾಯದ ಮಟ್ಟ ಮೀರುವ ಸಾಧ್ಯತೆ ಇದೆ.

ಇತ್ತೀಚಿನ ಸುದ್ದಿ

ಜಾಹೀರಾತು