2:56 PM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಗೆ ಜಿಲ್ಲಾಧಿಕಾರಿ ಭೇಟಿ: ರಸ್ತೆ ಸ್ಥಿತಿಗತಿ ಅವಲೋಕನ

21/07/2024, 12:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ರಸ್ತೆ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು.ಬಳಿಕ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ’ ಚಾರ್ಮಾಡಿ ಘಾಟ್ ನಲ್ಲಿ ತಡೆಗೋಡೆ ಕುಸಿತ,ಬಿರುಕು ಮತ್ತಿತರ ಸಮಸ್ಯೆ ಗಮನಕ್ಕೆ ಬಂದಿದ್ದು,ಅದನ್ನು ಪರಿಶೀಲಿಸಲು ಬಂದಿದ್ದೇವೆ. ಹಾಗೆಯೇ ಮಡಿಕೇರಿ,ಸಕಲೇಶಪುರ ಮಾರ್ಗದಲ್ಲಿ ಗುಡ್ಡ ಕುಸಿತದ ಹಿನ್ನಲೆಯಲ್ಲಿ ಈ ರಸ್ತೆ ಸಂಚಾರಕ್ಕೆ ಯೋಗ್ಯವಾಗಿದೆಯೇ ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಂಡು ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ನೀಡಲು ನಿರ್ಧಾರ ತೆಗೆದುಕೊಳ್ಳಲಿದ್ದೇವೆ.ಹಗಲಿನಲ್ಲಿಯೇ ಹೆಚ್ಚು ವಾಹನ ಬಿಡಲು ಕ್ರಮಕೈಗೊಳ್ಳಲಾಗುವುದು.ಈಗಾಗಲೇ ಬಾರಿ ಘನವಾಹನಗಳಿಗೆ ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸಲು ಹಿಂದಿನಿಂದಲೂ ನಿಷೇಧವಿದೆ. ಸರ್ಕಾರಿ ಬಸ್, ಗೂಡ್ಸ್ ವಾಹನ, ಲಘುವಾಹನಗಳಿಗೆ ಸಂಚರಿಸಲು ಅವಕಾಶವಿದೆ. ಆದರೆ ಮತ್ತೊಮ್ಮೆ ಕೊಡಗು, ಹಾಸನ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿ ಜನರ ಅನುಕೂಲತೆ ಮೇರೆಗೆ ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ಎಂದರು.
ಚಿಕ್ಕಮಗಳೂರು ವರಿಷ್ಠಾಧಿಕಾರಿ ವಿಕ್ರಂ ಅಮಟೆ ಚಾರ್ಮಾಡಿ ಘಾಟಿಗೆ ಜಿಲ್ಲಾಧಿಕಾರಿ ಭೇಟಿ: ರಸ್ತೆ ಸ್ಥಿತಿಗತಿ ಅವಲೋಕನ
ಮಾತನಾಡಿ’ಚಾರ್ಮಾಡಿ ಘಾಟಿಯಲ್ಲಿ ರಾತ್ರಿಯ ಹೊತ್ತಲ್ಲಿ ಮಳೆಯ ಹಿನ್ನಲೆಯಲ್ಲಿ ವಾಹನ ಸಂಚಾರ ನಿಷೇಧಕ್ಕೆ ಚಿಂತನೆ ನಡೆಸಲಾಗಿತ್ತು. ಆದರೆ ಮಡಿಕೇರಿ, ಶಿರಾಡಿ ಘಾಟ್ ಬಂದ್ ಆದ ಹಿನ್ನಲೆಯಲ್ಲಿ ಚಾರ್ಮಾಡಿ ಮಾತ್ರ ಸಂಚಾರಕ್ಕೆ ಮುಕ್ತವಾಗಿರುವುದರಿಂದ ಸಂಚಾರ ನಿಷೇಧದ ಬಗ್ಗೆ ನಿರ್ಧಾರ ಸದ್ಯಕ್ಕೆ ಕೈಗೊಂಡಿಲ್ಲ’ ಎಂದರು. ಸ್ಥಳೀಯ ಸಮಾಜ ಸೇವಕ ಸಂಜಯ್ ಗೌಡ, ತನುಕೊಟ್ಟಿಗೆಹಾರ, ಸಾಗರ್ ಮತ್ತಿತರರು ಚಾರ್ಮಾಡಿ ಘಾಟ್ ತಡೆಗೋಡೆ ಬಿರುಕು, ಕಾಮಗಾರಿ ಕಳಪೆ ಮಟ್ಟದಿಂದ ಕೂಡಿದೆ. ಚಾರ್ಮಾಡಿ ರಸ್ತೆಯ ಬಲ ಬದಿಯಲ್ಲಿ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆ ಕುಸಿಯುತ್ತದೆ. ರಸ್ತೆಯ ಬದಿ ಕಾಡು ಕಡಿದಿಲ್ಲ ಎಂದು ಅಧಿಕಾರಿಗಳ ಗಮನಕ್ಕೆ ತಂದರು. ರಾಷ್ಟ್ರೀಯ ಹೆದ್ದಾರಿ ಕಾರ್ಯಪಾಲಕ ಇಂಜೀನಿಯರ್ ಜಯಣ್ಣ ಮಾತನಾಡಿ’ ಕಳಪೆ ಕಾಮಗಾರಿ ಆಗಿಲ್ಲ.2019 ರಲ್ಲಿ ಭೂಕುಸಿತದಿಂದ ಅರ್ಧ ರಸ್ತೆಯೇ ಕುಸಿದಿತ್ತು.ಅದನ್ನು ಕೆಳಗಿನಿಂದಲೇ ರಿವಿಟ್ ಮೆಂಟ್ ಮಾಡಿ ರಸ್ತೆ ಸರಿಪಡಿಸಲಾಗಿದೆ.ತಡೆಗೋಡೆ ಮಾಡಿ ಬಳಿಕ ಆದರ ಆ ಕಡೆ ಎರಡೂವರೆ ಮೀಟರ್ ಸ್ಲ್ಯಾಬ್ ಹಾಕಲಾಗಿದೆ.ಅದನ್ನು ಸಮತಟ್ಟು ಮಾಡಲು ರೋಲರ್ ನಿಂದ ಕಷ್ಟ ಸಾಧ್ಯ. ಹಾಗಾಗಿ ಸ್ಲ್ಯಾಬ್ ಜಗ್ಗಿದೆ.ಅದಕ್ಕೆ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಗಿದೆ. ಬೇಸಿಗೆಯಲ್ಲಿ ಮತ್ತೊಮ್ಮೆ ಕಾಮಗಾರಿ ಪರಿಶೀಲಿಸಿ ಸಮಸ್ಯೆ ಬಗೆಹರಿಸಲಾಗುವುದು.ಚರಂಡಿ ಕಾಮಗಾರಿ ಹಾಗೂ ಜಂಗಲ್ ಕಟ್ಟಿಂಗ್ ಬಗ್ಗೆ ವ್ಯವಸ್ಥೆ ಮಾಡಲಾಗುವುದು. ಲಘು ಹಾಗೂ ಸಾಮಾನ್ಯ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಲು ಈ ರಸ್ತೆ ಯೋಗ್ಯವಾಗಿದೆ’ ಎಂದರು.ಭೇಟಿಯ ಸಂದರ್ಭದಲ್ಲಿ ಸಿಇಒ ಕೆ.ಎಸ್.ಗೀತಾ, ಎಇಇ ಕಾಂಬ್ಳೆ, ಎಇ ಸಂತೋಷ್,ಮೂಡಿಗೆರೆ ಇನ್ ಸ್ಪೆಕ್ಟರ್ ಸೋಮೇಗೌಡ, ಬಣಕಲ್ ಸಬ್ ಇನ್ ಸ್ಪೆಕ್ಟರ್ ಡಿ.ವಿ.ರೇಣುಕಾ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು