9:17 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ

22/07/2024, 20:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹೆಗ್ಗಡ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾಂತರಾಜ್ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾಗಿದ್ದ ಮನೋಜ್ ಅವರು ನೀಡಿದ್ದ ರಾಜೀನಾಮೆ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಒಟ್ಟು 19 ಮಂದಿ ಸದಸ್ಯರಿರುವ ಗ್ರಾಮ ಪಂಚಾಯಿತಿ ಗೆ ಇಂದು ನಡೆದ ಚುನಾವಣೆಯಲ್ಲಿ 18 ಸದಸ್ಯರು ಹಾಜರಿದ್ದು ಒಬ್ಬ ಸದಸ್ಯರು ಗೈರು ಹಾಜರಾಗಿರುತ್ತಾರೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಾಂತರಾಜ್ ಹಾಗು ಕಾಂಗ್ರೆಸ್ ಬೆಂಬಲಿತ ಬಸವರಾಜ್ ನಾಮಪತ್ರ ಸಲ್ಲಿಸಿರುತ್ತಾರೆ. ಯಾರೊಬ್ಬರು ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆದಿದೆ.
ನಂತರ ನಡೆದ ಚುನಾವಣೆಯಲ್ಲಿ ಕಾಂತರಾಜ್ ಅವರಿಗೆ 10 ಮತಗಳು ಬಸವರಾಜ್ ಅವರಿಗೆ 8 ಮತಗಳು ಬಂದ ಪರಿಣಾಮ 10 ಮತಗಳನ್ನು ಪಡೆದು ಕಾಂತರಾಜ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಾದ ಚಂದ್ರು ಘೋಷಣೆ ಮಾಡಿದರು.


ನೂತನ ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಿಗೆ ಬಿಜೆಪಿ ಕಾರ್ಯಕರ್ತ ಮುಖಂಡರು ಸಿಹಿ ತಿನಿಸಿ ಮಾಲಾರ್ಪಣೆ ಮಾಡುವ ಮೂಲಕ ಅಭಿನಂದಿಸಿದರು.
ಬಳಿಕ ನೂತನ ಅಧ್ಯಕ್ಷ ಕಾಂತರಾಜ್ ಮತ್ತು ರಾಜ್ಯ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ ಅಧ್ಯಕ್ಷರ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದಾಗ ಎಲ್ಲಾ ಸದಸ್ಯರಿಗೆ ಕೃತಜ್ಞತೆ ತಿಳಿಸಿ ಎಲ್ಲರ ಸಹಕಾರ ಬೆಂಬಲದೊಂದಿಗೆ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ ಚುನಾವಣೆಯ ಬಗ್ಗೆ ವಿವರಿಸಿದರು.
ಸಹಾಯಕ ಚುನಾವಣಾಧಿಕಾರಿ ಸತೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಸೇರಿದಂತೆ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು