1:28 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು