3:33 AM Friday12 - December 2025
ಬ್ರೇಕಿಂಗ್ ನ್ಯೂಸ್
ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ ಆರೆಸ್ಸೆಸ್ ಅಂದ್ರೆ ಉರಿಯುವ ಕಾಂಗ್ರೆಸ್ ನಾಯಕರಿಗೆ ಅವರ ಸರ್ಕಾರದಿಂದಲೇ ಉತ್ತರ: ಕೇಂದ್ರ ಸಚಿವ… ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 4126 ಕೋಟಿ ವೆಚ್ಚದಲ್ಲಿ ಅಗಲೀಕರಣ ಭೂ ಪರಿವರ್ತನೆ ನಿಯಮಗಳ ಸರಳೀಕರಣ: ವಿಧಾನ ಪರಿಷತ್ ನಲ್ಲಿ ಸಚಿವ ಕೃಷ್ಣ ಬೈರೇಗೌಡ

ಇತ್ತೀಚಿನ ಸುದ್ದಿ

7 ಕಿಮೀ ಶಿರಸಾಷ್ಟಾಂಗ ನಮಸ್ಕಾರ ಸಾಕಾರ: ತುರುವಿಹಾಳ ಭರ್ಜರಿ ಗೆಲುವಿಗೆ ಹೊತ್ತ ಹರಕೆ ಪೂರೈಸಿದ ವಿಶ್ವನಾಥ ದೇಸಾಯಿ !!

24/08/2021, 11:37

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಉಪ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಜಯಗಳಿಸಿದರೆ ಮಸ್ಕಿಯ ಗುಡದೂರು ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ವರೆಗೆ ಶಿರಸಾಷ್ಟಾಂಗ ನಮಸ್ಕಾರಗಳು ಹಾಕುವುದಾಗಿ ಹರಕೆ ಹೊತ್ತ ಗುಡೂರು ಗ್ರಾಮದ ತುರುವಿಹಾಳ ಅವರ ಅಪ್ಪಟ ಅಭಿಮಾನಿಯೊಬ್ಬರು ಇದೀಗ ಹರಕೆ ನೆರವೇರಿಸಿದ್ದಾರೆ.

ಮಸ್ಕಿ ತಾಲೂಕಿನ ಗುಡದೂರು ಗ್ರಾಮದಲ್ಲಿ ನೂತನ ಶಾಸಕರಿಗೆ ನಡೆಸಿದ ಅಭಿನಂದನಾ ಸಮಾರಂಭ ವೇಳೆ ವಿಶ್ವನಾಥ ದೇಸಾಯಿ ಎಂಬವರು ಬರೋಬ್ಬರಿ 7 ಕಿಮೀ. ದೂರದಿಂದ ಶಿರಸಾಷ್ಟಾಂಗ ನಮಸ್ಕಾರ ಮಾಡುತ್ತಾ ಮಸ್ಕಿಯ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ತಲುಪಿದರು. ಶಿರಸಾಷ್ಟಾಂಗಣ ಕ್ಷಣಗಳನ್ನು ಕಂಗಳಲ್ಲಿ ತುಂಬಿಸಿಕೊಳ್ಳಲು ಭಾರಿ ಸಂಖ್ಯೆಯಲ್ಲಿ ಜನಸ್ತೋಮ ನೆರೆದಿತ್ತು.

ಈ ಸಂದರ್ಭದಲ್ಲಿ ಶಾಸಕರು ಆರ್. ಬಸನಗೌಡ ತುರುವಿಹಾಳ, ಮಾಜಿ ಸಂಸದ ಶಿವರಾಮೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪುರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಹನುಮೇಶ ಬಾಗೋಡಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ್, ಸಿದ್ದಣ್ಣ ಹೂವಿನಬಾವಿ, ಬಸವರಾಜ ಹಿರೇಗೌಡರು, ವೆಂಕನಗೌಡ ಕೋಳಬಾಳ, ಮಲ್ಲನಗೌಡ ಸುಂಕನೂರ್, ಮಾಂತೇಶ್ ಜಾಲವಾಡಗಿ, ಸಿದ್ದನಗೌಡ ಮಾಟೂರು, ದುರ್ಗೇಶ್ ವಕೀಲರು, ಸಂಜಯ್ ಬಳಗನೂರ್, ಮಂಜುನಾಥ್, ಹುಲ್ಲೇಶ, ಮಲ್ಲೇಶ ಗುಡುದೂರು ಮುಂತಾದವರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ತುರುವಿಹಾಳ, ಮತದಾರರ ಋಣ ತೀರಿಸುವುದಾಗಿ ವಾಗ್ದಾನ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು