5:53 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಉಳ್ಳಾಲ ಪರಿಸರದಲ್ಲಿ ಬೀದಿ ನಾಯಿಗಳ ಕಾಟ: 7ನೇ ತರಗತಿ ವಿದ್ಯಾರ್ಥಿ ಮೇಲೆ ಶ್ವಾನಗಳ ದಾಳಿ; ತೀವ್ರ ಗಾಯ

24/07/2024, 17:26

ಉಳ್ಳಾಲ(reporterkarnataka.com): ಉಳ್ಳಾಲ ಸುತ್ತಮುತ್ತಲ ಪ್ರದೇಶದಲ್ಲಿ ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ ಪ್ರೈಮರಿ ಶಾಲೆಯ ವಿದ್ಯಾರ್ಥಿಯೊಬ್ಬನ ಮೇಲೆ 4- 5 ಬೀದಿ ನಾಯಿಗಳು ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿದೆ.


ಮಂಗಳವಾರದಂದು ಬೆಳಿಗ್ಗೆ 7ನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲೆಗೆ ಹೋಗುವಾಗ ನಾಲ್ಕೈದು ಬೀದಿ ನಾಯಿಗಳು ಸೇರಿ ದಾಳಿ ಮಾಡಿವೆ. ಅದೃಷ್ಟವಶಾತ್ ಆಟೊ ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿರುತ್ತದೆ. ಗಾಯಗೊಂಡ ವಿದ್ಯಾರ್ಥಿಯನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇತ್ತೀಚಿಗೆ ಉಳ್ಳಾಲ ಪರಿಸರದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೀದಿ ನಾಯಿಗಳ ಓಡಾಟ ಹೆಚ್ಚಾಗಿದೆ. ಶಾಲೆಗೆ ಮತ್ತು ಮದರಸ ಹೋಗುವ ಮಕ್ಕಳಿಗೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಯಾವ ಸಂದರ್ಭದಲ್ಲಿ ಈ ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುತ್ತವೆ ಹೇಳಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಘಟನೆ ನಡೆದ ಬಳಿಕ ಸೂಕ್ತ ಕ್ರಮ ಅಂತಹ ಹೇಳಿಕೆ ನೀಡಿ, ಘಟನಾ ಸ್ಥಳಕ್ಕೆ ಭೇಟಿ ನೀಡುವ ಬದಲು ಈ ಬೀದಿ ನಾಯಿಗಳನ್ನು ನಿಯಂತ್ರಣದಲ್ಲಿ ಇಡಲು ಸೂಕ್ತ ಕ್ರಮವನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಇಲ್ಲದೆ ಹೋದಲ್ಲಿ ಬೀದಿ ನಾಯಿಗಳ ಹುಚ್ಚಾಟಕ್ಕೆ ಹಲವಾರು ಮಕ್ಕಳ ಬಲಿಯನ್ನು ನೀಡಬೇಕಾಗಿ ಬರಬಹುದು.
ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿ ಉಳ್ಳಾಲ ನಗರ ಸಭೆ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳ ಬೇಕಾಗಿದೆ. ಶೀಘ್ರ ಕ್ರಮಕೈಗೊಳ್ಳದಿದ್ದರೆ ಈ ಬಗ್ಗೆ ಜನಜಾಗ್ರತಿಯನ್ನು ಮೂಡಿಸಿ ಬೃಹತ್ ಪ್ರತಿಭಟನೆ ಮಾಡಲಾಗುವುದು‌‌ ಎಂದು ಸಾಮಾಜಿಕ ಕಾರ್ಯಕರ್ತ ತೌಸೀನ್ ಅಳೆಕಲ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು