9:58 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಮಂಗಳೂರು ಭಂಡಾರಿ ಸಮಾಜ ಸಂಘದಿಂದ ‘ಆಟಿಡೊಂಜಿ ದಿನ’: 46 ಬಗೆಯ ತಿಂಡಿ ತಿನಿಸುಗಳ ವೈಭವ

24/07/2024, 19:44

ಮಂಗಳೂರು(reporterkarnataka.com): ಮಂಗಳೂರು ಭಂಡಾರಿ ಸಮಾಜ ಸಂಘ ಮತ್ತು ಮಂಗಳೂರು ಭಂಡಾರಿ ಸ್ವಯಂಸೇವಕ ಸಂಘದ ಆಶ್ರಯದಲ್ಲಿ ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಸಾರುವ ಆಟಿಡೊಂಜಿ ದಿನ (ಆಷಾಢ ಮಾಸದ ಒಂದು ದಿನ) ಕಾರ್ಯಕ್ರಮ ನಗರದ ಕದ್ರಿಯ ಸುಮ ಸದನದಲ್ಲಿ ಭಾನುವಾರ ನಡೆಯಿತು.

ಸಂಘದ ಅಧ್ಯಕ್ಷ ಮುರಳೀಧರ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮವನ್ನು ತೆಂಗಿನ ಮರದ ಹಿಂಗಾರವನ್ನು ಅರಳಿಸಿ ಉದ್ಘಾಟಿಸಿದ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಲಕ್ಷ್ಮಣ ಕರಾವಳಿ ಅವರು ಮಾತನಾಡಿ, ಅಂದಿನ ಕಾಲದಲ್ಲಿ ಆಷಾಡ ಮಾಸದಲ್ಲಿ ನಾವು ತಯಾರಿಸುತ್ತಿದ್ದ ತಿಂಡಿ ತಿನಿಸುಗಳು, ಆ ಸಂಸ್ಕೃತಿ ಈಗಿನ ಯುವಕರಲ್ಲಿ ಕ್ರಮೇಣ ಮರೆಯಾಗುತ್ತಿದೆ. ಅದನ್ನು ನೆನಪಿಸಲು ಪ್ರತೀ ವರ್ಷ ಇಂತಹ ಕಾರ್ಯಕ್ರಮವನ್ನು ನಮ್ಮ ಸಂಘಗಳು ಆಯೋಜಿಸುತ್ತಿರುವುದು ನಿಜಕ್ಕೂ ಅಭಿನಂದನೀಯ ಎಂದರು.
ಇಂತಹ ಕಾರ್ಯಕ್ರಮಗಳಲ್ಲಿ ಯುವಕರು ಸಾಧ್ಯವಾದಷ್ಟು ಪಾಲ್ಗೊಂಡು ಹಿಂದಿನ ಆಚರಣೆಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಹಿರಿಯರ ಆಚರಣೆಗಳ ಬಗ್ಗೆ ತಮ್ಮ ಮಕ್ಕಳಿಗೆ ತಿಳಿಸುವ ಮೂಲಕ ತುಳುನಾಡಿನ ಸಂಸ್ಕೃತಿಯ ಅರಿವು ಮೂಡಿಸಬೇಕು ಎಂದು ಕಿವಿಮಾತು ಹೇಳಿದರು.
ಮುಖ್ಯ ಅತಿಥಿಯಾದ ಭಂಡಾರಿ ಮಹಾಮಂಡಲದ ನಿಕಟಪೂರ್ವ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ ಅವರು ಮಾತನಾಡಿ, ಸಮಾಜದಲ್ಲಿ ಇಂತಹ ಕಾರ್ಯಕ್ರಮ ನಡೆಯುವಾಗ ಬಂಧುಗಳೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಭಂಡಾರಿ ಸಮಾಜ ಸಂಘ ಮಂಗಳೂರು ಸಂಘದ ಸ್ವಂತ ಜಾಗದಲ್ಲಿ ಭಂಡಾರಿ ಸಭಾಭವನ ನಿರ್ಮಾಣ ಮಾಡುವ ಯೋಜನೆ ಹಾಕಿದರೆ ಅದಕ್ಕೆ ಮುಂಬೈಯ ಸಮಾಜ ಬಾಂಧವರಿಂದ ಮತ್ತು ವೈಯಕ್ತಿಕವಾಗಿ 2 ಕೋಟಿ ಧನ ಸಹಾಯ ದೊರಕಿಸಿ ಕೊಡುತ್ತೇನೆ. ಅದೇ ರೀತಿ ಸಮಾಜದ ಇನ್ನೊಬ್ಬ ಬಂಧುವಿನ ಮೂಲಕ 50 ಲಕ್ಷ ದೊರಕಿಸಿಕೊಡುವುದಾಗಿ ಆಸ್ವಾಸನೆ ನೀಡಿದರು. ಸಭಾ ಭವನ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.
ಆಹಾರ ಮತ್ತು ಆರೋಗ್ಯದ ಬಗ್ಗೆ ಉಡುಪಿಯ ಉದ್ಯಾವರ ಎಸ್. ಡಿ ಎಮ್. ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮಮತಾ ಕೆ. ವಿ. ಮಾತನಾಡಿ, ಹಿಂದೆ ಮಳೆಗಾಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದರು. ಕೃಷಿಕರಿಗೆ ಮನೆಯ ಉಪ್ಪರಿಗೆಯಲ್ಲಿ ಅಕ್ಕಿ ಮುಡಿ ಇದ್ದರೆ ಮಾತ್ರ ಊಟ ಇಲ್ಲದಿದ್ದರೆ, ಗಂಜಿ ನೀರೇ ಗತಿ.
ಮಾವಿನಕಾಯಿ, ಸೌತೆಕಾಯಿ, ಹಲಸಿನ ಕಾಯಿ ಉಪ್ಪು ನೀರಿನಲ್ಲಿ ಹಾಕಿ ಶೇಖರಿಸಿ ಮಳೆಗಾಲದಲ್ಲಿ ಇದರ ಪದಾರ್ಥ ಮಾಡುವುದರಿಂದ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎನ್ನುತ್ತಾ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಭಂಡಾರಿ ಮಹಾಮಂಡಲದ ಅಧ್ಯಕ್ಷ ಶಶಿಧರ ಕಾರ್ಕಳ,
ಭಂಡಾರಿ ಸ್ವಯಂಸೇವಕ ಸಂಘದ ಅಧ್ಯಕ್ಷೆ ರಾಜೀವಿ ಮೂಡುಶೆಡ್ಡೆ, ಅಧ್ಯಕ್ಷ ಮುರಳೀಧರ ಭಂಡಾರಿ ಮತ್ತು ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಭಂಡಾರಿ ಮಾಲೆಮಾರ್ ಉಪಸ್ಥಿತರಿದ್ದರು. ಸುಮಾರು 46 ಬಗೆಯ ತಿಂಡಿ ತಿನಿಸುಗಳು ಇದ್ದವು. ಹಳೆಯ ಕಾಲದ ಕೃಷಿ ಸಲಕರಣೆಯ ಸಾಮಗ್ರಿಗಳು, ಅಕ್ಕಿ ಮಡಿ, ಚಿನ್ನೆ ಮನೆ, ಅನ್ನ ಬಸಿಯುವ ಮರಾಯಿ, ಕಲಶೆ, ಸೇರು, ಪಾವು ವಿವಿಧ ಬಗೆಯ ಮಣ್ಣಿನ ಪಾತ್ರೆಗಳು ಇನ್ನಿತರ ಹಳೆಯ ಕಾಲದ ವಸ್ತುಗಳು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡಿತ್ತು.
ಪದ್ಮನಾಭ ಎಂ. ಸ್ವಾಗತಿಸಿದರು. ಅನಿತಾ ಅಮರನಾಥ್, ಧನ್ಯಾ ಸುರತ್ಕಲ್ , ದಿವ್ಯ ಲತಾ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು. ವಾಣಿ ಎಸ್. ಭಂಡಾರಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು