1:59 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರು‌ನಾಟಕ, ನೃತ್ಯ ಪ್ರದರ್ಶನ

24/07/2024, 23:08

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತ ಅನ್ನಾ ಅವರ ಬಗ್ಗೆ ಮಾತನಾಡಿ ಅವರ 5 ಗುಣಗಳಾದ ಮೌನತೆ, ಪ್ರಾರ್ಥನೆ, ದಾನ ಧರ್ಮ, ಸರಳತೆ, ಪ್ರೀತಿ, ಗೌರವ ನಮ್ಮ ಜೀವನದಲ್ಲಿ ಅಳವಡಿಸಬೇಕೆಂದರು.
ಸಂತ ಅನ್ನಾ ಅವರ ಈ 5 ಗುಣಗಳನ್ನು ಅಳವಡಿಸಿ ಕ್ವಿಜನ್ನು ಏರ್ಪಡಿಸಲಾಯಿತು. ಕ್ವಿಜಿನಲ್ಲಿ ವಿಜೇತರನ್ನು ಸಿ. ನಿರ್ಮಲಾ ಅವರು ಪ್ರಶಂಸಿದರು. ಕಾಲೇಜಿನ ಪ್ರಾಂಶುಪಾಲೆ ಸಿ. ವಿನೂತ ಅವರು ಸಂತ ಅನ್ನಾ ಅವರ ಬಗ್ಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾರ್ಮೆಲ್ ಮಾಜಿ ಶಿಕ್ಷಕಿ ಮಾರ್ಗರೇಟ್ ಮೊಂತೇರೊ, ಶಿಕ್ಷಕಿಯಾದ ಅಸುಂತಾ ಡಿಸೋಜ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಾ ಅವರ ಜೀವನದ ಬಗ್ಗೆ ಕಿರು ನಾಟಕ, ನೃತ್ಯ ಹಾಗೂ ಇತರ ಕಾರ್ಯಕ್ರಮಗಳು ನಡೆಯಿತು. ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸಾರಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು