8:52 PM Thursday17 - October 2024
ಬ್ರೇಕಿಂಗ್ ನ್ಯೂಸ್
ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ… ನಿಂತಿದ್ದ ಗೂಡ್ಸ್ ರೈಲಿಗೆ ಮೈಸೂರು-ದರ್ಭಂಗಾ ಭಾಗಮತಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ: ಹಳಿ ತಪ್ಪಿದ… ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ… ಸಾಲ ವಾಪಸ್ ಕೇಳಿದಕ್ಕೆ ಕಾರ್ಪೆಂಟರ್ ಅಮಾನುಷ ಕೊಲೆ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ… ಮಂಗಳೂರು: ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಕಾಫಿ ಬೆಳೆಗಾರರ ಪ್ರತಿಭಟನೆ ತೀರ್ಥಹಳ್ಳಿ: ಸಾಲಬಾಧೆಯಿಂದ ಮನನೊಂದು ರೈತ ಅತ್ಮಹತ್ಯೆ

ಇತ್ತೀಚಿನ ಸುದ್ದಿ

ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಜನ್ಮದಿನಾಚರಣೆ: ಕಿರು‌ನಾಟಕ, ನೃತ್ಯ ಪ್ರದರ್ಶನ

24/07/2024, 23:08

ಮಂಗಳೂರು(reporterkarnataka.com): ನಗರದ ಸಂತ ಆನ್ಸ್ ಕಮ್ಯುನಿಟಿ ಕಾಲೇಜಿನಲ್ಲಿ ಸಂತ ಅನ್ನಾ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರಥಮವಾಗಿ ಫಾ. ರಿಚರ್ಡ್ ಕಪುಚಿನ್ ಅವರಿಂದ ಬಲಿಪೂಜೆ ಅರ್ಪಿಸಲಾಯಿತು. ನಂತರದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಿ. ನಿರ್ಮಲಾ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಂತ ಅನ್ನಾ ಅವರ ಬಗ್ಗೆ ಮಾತನಾಡಿ ಅವರ 5 ಗುಣಗಳಾದ ಮೌನತೆ, ಪ್ರಾರ್ಥನೆ, ದಾನ ಧರ್ಮ, ಸರಳತೆ, ಪ್ರೀತಿ, ಗೌರವ ನಮ್ಮ ಜೀವನದಲ್ಲಿ ಅಳವಡಿಸಬೇಕೆಂದರು.
ಸಂತ ಅನ್ನಾ ಅವರ ಈ 5 ಗುಣಗಳನ್ನು ಅಳವಡಿಸಿ ಕ್ವಿಜನ್ನು ಏರ್ಪಡಿಸಲಾಯಿತು. ಕ್ವಿಜಿನಲ್ಲಿ ವಿಜೇತರನ್ನು ಸಿ. ನಿರ್ಮಲಾ ಅವರು ಪ್ರಶಂಸಿದರು. ಕಾಲೇಜಿನ ಪ್ರಾಂಶುಪಾಲೆ ಸಿ. ವಿನೂತ ಅವರು ಸಂತ ಅನ್ನಾ ಅವರ ಬಗ್ಗೆ ತಿಳಿ ಹೇಳಿದರು.
ಕಾರ್ಯಕ್ರಮದಲ್ಲಿ ಅತಿಥಿಯಾಗಿ ಕಾರ್ಮೆಲ್ ಮಾಜಿ ಶಿಕ್ಷಕಿ ಮಾರ್ಗರೇಟ್ ಮೊಂತೇರೊ, ಶಿಕ್ಷಕಿಯಾದ ಅಸುಂತಾ ಡಿಸೋಜ, ಶೇರಿನ್, ಪ್ರತಿಭಾ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂತ ಅನ್ನಾ ಅವರ ಜೀವನದ ಬಗ್ಗೆ ಕಿರು ನಾಟಕ, ನೃತ್ಯ ಹಾಗೂ ಇತರ ಕಾರ್ಯಕ್ರಮಗಳು ನಡೆಯಿತು. ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸಾರಾ ಅವರು ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು