12:13 PM Sunday13 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಎನ್ ಎಸ್ ಯುಐ ರಾಜ್ಯ ಜಂಟಿ ಕಾರ್ಯದರ್ಶಿ ಆಗಿ ಕಾಂಗ್ರೆಸ್ ಯುವ ನಾಯಕ ಜಿಂಕಲರ ಶಶಾಂಕ ನೇಮಕ 

24/08/2021, 13:12

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಾಂಗ್ರೇಸ್ ಯುವ ನಾಯಕ ಜಿಂಕಲರ ಶಶಾಂಕ ಅವರು ಎನ್.ಎಸ್.ಯು.ಐ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಈ ಕುರಿತು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟಿಫನ್  ಅವರು, ಶಶಾಂಕ ಅವರನ್ನು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್

ಸಂಘಟನೆಯ ಜಂಟಿ ಕಾರ್ಯದರ್ಶಿಗಳನ್ನಾಗಿ ಆಗಸ್ಟ್ 18ರಂದು ನೇಮಿಸಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಅಭಿನಂದನೆ; ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳು ರಾಷ್ಟ್ರ ಹಾಗೂ ರಾಜ್ಯ ರಾಜಕೀಯದಲ್ಲಿ, ತಮ್ಮದೇ ಆದ ವಿಶಿಷ್ಟ ವಾದ ಪ್ರಭಾವ ಮತ್ತು ತನ್ನದೇ ಆದ ಛಾಪನ್ನು ಮೂಡಿಸುತ್ತಲೇ ಬಂದಿವೆ. ಅದು ಯಾವುದೇ ಪಕ್ಷವಾಗಿರಬಹುದು ಅಥವಾ ಎರಡೂ ಜಿಲ್ಲೆಗಳ ಯಾವುದೇ ಭಾಗದ ಮುಖಂಡರಿರಬಹುದು. ಅಂತೆಯೇ ಕೂಡ್ಲಿಗಿ ಪಟ್ಟಣ ಜಿಂಕಲರ ಶಶಾಂಕರವರು ರಾಷ್ಟ್ರೀಯ ಕಾಂಗ್ರೇಸ್ ಮುಖಂಡರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಪಕ್ಷದ ವಿದ್ಯಾರ್ಥಿ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿಗಳಾಗಿ ತಾವು ನೇಮಕ ವಾಗೋ ಮೂಲಕ ಸಮಾಜಕ್ಕೆ ಪ್ರಸ್ತುತ ಪಡಿಸಿದ್ದಾರೆ.ಅದಕ್ಕಾಗಿ ಅವರಿಗೆ ಪಕ್ಷದ ಮುಖಂಡರಿಂದ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.

ಪ್ರವಾಸಿ ಮಂದಿರದಲ್ಲಿ ಜರುಗಿದ ಪತ್ರಿಕಾ ಗೋಷ್ಠಿ ಯಲ್ಲಿ, ಶಶಾಂಕ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೇಸ್ ಮಹಿಳಾ ಮುಖಂಡರಾದ ಜಿಂಕಲರ ನಾಗಮಣಿ, ಎಚ್.ಕೆ.ಕುಂಟೆ ಛಲುವಾದಿ ಉಮೇಶ, ಪಪಂ ಸದಸ್ಯ ಕಾವಲ್ಲಿ ಶಿವಪ್ಪ, ಪ್ರದೀಪ, ಕೆ.ಕೆ.ಹಟ್ಟಿ ಬಸವರಾಜ, ಮೊರಬದ ವೀರಭದ್ರಪ್ಪ, ಚಾಂದಭಾಷಾ, ಮುನ್ನಾಬಯ್ಯ, ಮಾಳ್ಗಿ ಮಂಜುನಾಥ, ಸಾಲುಮನಿ ರಾಘವೇಂದ್ರ ಸೇರಿದಂತೆ ಪಟ್ಟಣ ಹಾಗೂ ತಾಲೂಕಿನ ವಿವಿದ ಭಾಗದಿಂದ ಆಗಮಿಸಿದ್ದ ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು