9:34 PM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಎನ್ ಎಸ್ ಯುಐ ರಾಜ್ಯ ಜಂಟಿ ಕಾರ್ಯದರ್ಶಿ ಆಗಿ ಕಾಂಗ್ರೆಸ್ ಯುವ ನಾಯಕ ಜಿಂಕಲರ ಶಶಾಂಕ ನೇಮಕ 

24/08/2021, 13:12

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಾಂಗ್ರೇಸ್ ಯುವ ನಾಯಕ ಜಿಂಕಲರ ಶಶಾಂಕ ಅವರು ಎನ್.ಎಸ್.ಯು.ಐ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಈ ಕುರಿತು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟಿಫನ್  ಅವರು, ಶಶಾಂಕ ಅವರನ್ನು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್

ಸಂಘಟನೆಯ ಜಂಟಿ ಕಾರ್ಯದರ್ಶಿಗಳನ್ನಾಗಿ ಆಗಸ್ಟ್ 18ರಂದು ನೇಮಿಸಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಅಭಿನಂದನೆ; ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳು ರಾಷ್ಟ್ರ ಹಾಗೂ ರಾಜ್ಯ ರಾಜಕೀಯದಲ್ಲಿ, ತಮ್ಮದೇ ಆದ ವಿಶಿಷ್ಟ ವಾದ ಪ್ರಭಾವ ಮತ್ತು ತನ್ನದೇ ಆದ ಛಾಪನ್ನು ಮೂಡಿಸುತ್ತಲೇ ಬಂದಿವೆ. ಅದು ಯಾವುದೇ ಪಕ್ಷವಾಗಿರಬಹುದು ಅಥವಾ ಎರಡೂ ಜಿಲ್ಲೆಗಳ ಯಾವುದೇ ಭಾಗದ ಮುಖಂಡರಿರಬಹುದು. ಅಂತೆಯೇ ಕೂಡ್ಲಿಗಿ ಪಟ್ಟಣ ಜಿಂಕಲರ ಶಶಾಂಕರವರು ರಾಷ್ಟ್ರೀಯ ಕಾಂಗ್ರೇಸ್ ಮುಖಂಡರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಪಕ್ಷದ ವಿದ್ಯಾರ್ಥಿ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿಗಳಾಗಿ ತಾವು ನೇಮಕ ವಾಗೋ ಮೂಲಕ ಸಮಾಜಕ್ಕೆ ಪ್ರಸ್ತುತ ಪಡಿಸಿದ್ದಾರೆ.ಅದಕ್ಕಾಗಿ ಅವರಿಗೆ ಪಕ್ಷದ ಮುಖಂಡರಿಂದ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.

ಪ್ರವಾಸಿ ಮಂದಿರದಲ್ಲಿ ಜರುಗಿದ ಪತ್ರಿಕಾ ಗೋಷ್ಠಿ ಯಲ್ಲಿ, ಶಶಾಂಕ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೇಸ್ ಮಹಿಳಾ ಮುಖಂಡರಾದ ಜಿಂಕಲರ ನಾಗಮಣಿ, ಎಚ್.ಕೆ.ಕುಂಟೆ ಛಲುವಾದಿ ಉಮೇಶ, ಪಪಂ ಸದಸ್ಯ ಕಾವಲ್ಲಿ ಶಿವಪ್ಪ, ಪ್ರದೀಪ, ಕೆ.ಕೆ.ಹಟ್ಟಿ ಬಸವರಾಜ, ಮೊರಬದ ವೀರಭದ್ರಪ್ಪ, ಚಾಂದಭಾಷಾ, ಮುನ್ನಾಬಯ್ಯ, ಮಾಳ್ಗಿ ಮಂಜುನಾಥ, ಸಾಲುಮನಿ ರಾಘವೇಂದ್ರ ಸೇರಿದಂತೆ ಪಟ್ಟಣ ಹಾಗೂ ತಾಲೂಕಿನ ವಿವಿದ ಭಾಗದಿಂದ ಆಗಮಿಸಿದ್ದ ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು