4:01 PM Tuesday7 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಎನ್ ಎಸ್ ಯುಐ ರಾಜ್ಯ ಜಂಟಿ ಕಾರ್ಯದರ್ಶಿ ಆಗಿ ಕಾಂಗ್ರೆಸ್ ಯುವ ನಾಯಕ ಜಿಂಕಲರ ಶಶಾಂಕ ನೇಮಕ 

24/08/2021, 13:12

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಕಾಂಗ್ರೇಸ್ ಯುವ ನಾಯಕ ಜಿಂಕಲರ ಶಶಾಂಕ ಅವರು ಎನ್.ಎಸ್.ಯು.ಐ ರಾಜ್ಯ ಜಂಟಿ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

ಈ ಕುರಿತು ಸಂಘಟನೆಯ ರಾಷ್ಟ್ರೀಯ ಕಾರ್ಯದರ್ಶಿ ಎರಿಕ್ ಸ್ಟಿಫನ್  ಅವರು, ಶಶಾಂಕ ಅವರನ್ನು ರಾಷ್ಟ್ರೀಯ ವಿದ್ಯಾರ್ಥಿ ಕಾಂಗ್ರೆಸ್

ಸಂಘಟನೆಯ ಜಂಟಿ ಕಾರ್ಯದರ್ಶಿಗಳನ್ನಾಗಿ ಆಗಸ್ಟ್ 18ರಂದು ನೇಮಿಸಿರುವುದಾಗಿ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಅಭಿನಂದನೆ; ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳು ರಾಷ್ಟ್ರ ಹಾಗೂ ರಾಜ್ಯ ರಾಜಕೀಯದಲ್ಲಿ, ತಮ್ಮದೇ ಆದ ವಿಶಿಷ್ಟ ವಾದ ಪ್ರಭಾವ ಮತ್ತು ತನ್ನದೇ ಆದ ಛಾಪನ್ನು ಮೂಡಿಸುತ್ತಲೇ ಬಂದಿವೆ. ಅದು ಯಾವುದೇ ಪಕ್ಷವಾಗಿರಬಹುದು ಅಥವಾ ಎರಡೂ ಜಿಲ್ಲೆಗಳ ಯಾವುದೇ ಭಾಗದ ಮುಖಂಡರಿರಬಹುದು. ಅಂತೆಯೇ ಕೂಡ್ಲಿಗಿ ಪಟ್ಟಣ ಜಿಂಕಲರ ಶಶಾಂಕರವರು ರಾಷ್ಟ್ರೀಯ ಕಾಂಗ್ರೇಸ್ ಮುಖಂಡರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಅವರು ಪಕ್ಷದ ವಿದ್ಯಾರ್ಥಿ ಸಂಘಟನೆಯ ರಾಜ್ಯ ಜಂಟಿ ಕಾರ್ಯದರ್ಶಿಗಳಾಗಿ ತಾವು ನೇಮಕ ವಾಗೋ ಮೂಲಕ ಸಮಾಜಕ್ಕೆ ಪ್ರಸ್ತುತ ಪಡಿಸಿದ್ದಾರೆ.ಅದಕ್ಕಾಗಿ ಅವರಿಗೆ ಪಕ್ಷದ ಮುಖಂಡರಿಂದ ಕಾರ್ಯಕರ್ತರಿಂದ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.

ಪ್ರವಾಸಿ ಮಂದಿರದಲ್ಲಿ ಜರುಗಿದ ಪತ್ರಿಕಾ ಗೋಷ್ಠಿ ಯಲ್ಲಿ, ಶಶಾಂಕ ಅವರನ್ನು ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೇಸ್ ಮಹಿಳಾ ಮುಖಂಡರಾದ ಜಿಂಕಲರ ನಾಗಮಣಿ, ಎಚ್.ಕೆ.ಕುಂಟೆ ಛಲುವಾದಿ ಉಮೇಶ, ಪಪಂ ಸದಸ್ಯ ಕಾವಲ್ಲಿ ಶಿವಪ್ಪ, ಪ್ರದೀಪ, ಕೆ.ಕೆ.ಹಟ್ಟಿ ಬಸವರಾಜ, ಮೊರಬದ ವೀರಭದ್ರಪ್ಪ, ಚಾಂದಭಾಷಾ, ಮುನ್ನಾಬಯ್ಯ, ಮಾಳ್ಗಿ ಮಂಜುನಾಥ, ಸಾಲುಮನಿ ರಾಘವೇಂದ್ರ ಸೇರಿದಂತೆ ಪಟ್ಟಣ ಹಾಗೂ ತಾಲೂಕಿನ ವಿವಿದ ಭಾಗದಿಂದ ಆಗಮಿಸಿದ್ದ ಕಾಂಗ್ರೇಸ್ ಮುಖಂಡರು ಮತ್ತು ಕಾರ್ಯಕರ್ತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು