12:41 PM Thursday17 - September 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ*

ಇತ್ತೀಚಿನ ಸುದ್ದಿ

ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ

25/07/2024, 15:01

ಶಿವು ರಾಠೋಡ ನಾಗಬೇನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು.


ವೀರೇಶ್ ನಗರದಿಂದ ನಾಗಬೇನಾಳ ತಾಂಡಾದವರೆಗೂ ಬಂಜಾರ ಸಮುದಾಯದ ಉಡುಪು ತೊಡಗಿ ಧರಿಸಿಕೊಂಡು ಚಿಕ್ಕ ಮಕ್ಕಳು ಹಾಗೂ ಹಿರಿಯರು ಕಳಸ ಹಾಗೂ ನೃತ್ಯ ಮೂಲಕ ಶ್ರೀ ಸಂತ ಸೇವಾಲಾಲ್ ದೇವಸ್ಥಾನವರೆಗೆ ಮೆರವಣಿಗೆ ನಡೆಸಿದರು.
ಮರುದಿನ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಐತಿಹಾಸಿಕ ಸ್ಥಳವಾದ ಜಲದುರ್ಗಕ್ಕೆ ಹೋಗಿ ಎಲ್ಲಮ್ಮ ದೇವಿ ದರ್ಶನ ಪಡೆದು ಪಾವನಾರಾದರು.
ಅದರ ಜೊತೆಗೆ ಸಾಯಂಕಾಲ ನಾಗಬೇನಾಳ ತಾಂಡದಲ್ಲಿ ಬಂದು ಬಂಜಾರ ಸಮುದಾಯ ಯಾವ ರೀತಿ ಪ್ರಾರಂಭವಾಯಿತು, ಆ ಸಮಾಜ ಉದಯ ಮತ್ತು ಅದರ ನೋವು- ನಲಿವಿನ ಬಗ್ಗೆ ಒಂದು ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಶಹಪುರ್ ಶರಣು ಹಾಗೂ ಚಿಂಚೋಳಿ ಸಾವಿತ್ರಿಬಾಯಿ ತಂಡವು ಮನರಂಜನೆ ಜೊತೆಗೆ ಸಮಾಜದ ಅರಿವು ಸಮಾಜದ ಬೆಳವಣಿಗೆ ಮತ್ತು ಸಮಾಜದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಕಾರ್ಯಕ್ರಮವು ರಾತ್ರಿ 10 ಬೆಳಗಿನ ಜಾವ 7 ವರೆಗೂ ನೆರವೇರಿತು. ಊರಿನ ಗುರು ಹಿರಿಯರು, ಮಹಿಳೆಯರು ಇಡೀ ರಾತ್ರಿ ಭಜನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೃಷ್ಣಪ್ಪ ನಾಯಕ, ಆನಂದ ನಾಯಕ್, ಮಂಜುನಾಥ ನಾಯಕ್, ರಘು ಪವಾರ್, ನಾಗಬೇನಾಳ ಯುವಕರ ತಂಡ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು