11:06 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ

25/07/2024, 15:01

ಶಿವು ರಾಠೋಡ ನಾಗಬೇನಾಳ ವಿಜಯಪುರ

info.reporterkarnataka@gmail.com

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗಬೇನಾಳ ತಾಂಡಾದಲ್ಲಿ ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು.


ವೀರೇಶ್ ನಗರದಿಂದ ನಾಗಬೇನಾಳ ತಾಂಡಾದವರೆಗೂ ಬಂಜಾರ ಸಮುದಾಯದ ಉಡುಪು ತೊಡಗಿ ಧರಿಸಿಕೊಂಡು ಚಿಕ್ಕ ಮಕ್ಕಳು ಹಾಗೂ ಹಿರಿಯರು ಕಳಸ ಹಾಗೂ ನೃತ್ಯ ಮೂಲಕ ಶ್ರೀ ಸಂತ ಸೇವಾಲಾಲ್ ದೇವಸ್ಥಾನವರೆಗೆ ಮೆರವಣಿಗೆ ನಡೆಸಿದರು.
ಮರುದಿನ ರಾಯಚೂರು ಜಿಲ್ಲೆಯ ಲಿಂಗಸೂರು ತಾಲೂಕಿನ ಐತಿಹಾಸಿಕ ಸ್ಥಳವಾದ ಜಲದುರ್ಗಕ್ಕೆ ಹೋಗಿ ಎಲ್ಲಮ್ಮ ದೇವಿ ದರ್ಶನ ಪಡೆದು ಪಾವನಾರಾದರು.
ಅದರ ಜೊತೆಗೆ ಸಾಯಂಕಾಲ ನಾಗಬೇನಾಳ ತಾಂಡದಲ್ಲಿ ಬಂದು ಬಂಜಾರ ಸಮುದಾಯ ಯಾವ ರೀತಿ ಪ್ರಾರಂಭವಾಯಿತು, ಆ ಸಮಾಜ ಉದಯ ಮತ್ತು ಅದರ ನೋವು- ನಲಿವಿನ ಬಗ್ಗೆ ಒಂದು ಭಜನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಭಜನಾ ಕಾರ್ಯಕ್ರಮವನ್ನು ಶಹಪುರ್ ಶರಣು ಹಾಗೂ ಚಿಂಚೋಳಿ ಸಾವಿತ್ರಿಬಾಯಿ ತಂಡವು ಮನರಂಜನೆ ಜೊತೆಗೆ ಸಮಾಜದ ಅರಿವು ಸಮಾಜದ ಬೆಳವಣಿಗೆ ಮತ್ತು ಸಮಾಜದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿದರು. ಕಾರ್ಯಕ್ರಮವು ರಾತ್ರಿ 10 ಬೆಳಗಿನ ಜಾವ 7 ವರೆಗೂ ನೆರವೇರಿತು. ಊರಿನ ಗುರು ಹಿರಿಯರು, ಮಹಿಳೆಯರು ಇಡೀ ರಾತ್ರಿ ಭಜನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೃಷ್ಣಪ್ಪ ನಾಯಕ, ಆನಂದ ನಾಯಕ್, ಮಂಜುನಾಥ ನಾಯಕ್, ರಘು ಪವಾರ್, ನಾಗಬೇನಾಳ ಯುವಕರ ತಂಡ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು