1:29 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಸೇವೆ ಮಾಡುವ ಅವಕಾಶದಿಂದ ವಂಚಿತನಾದ ನೋವು ಇದೆ: ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ

25/07/2024, 15:08

ಶಿವು ರಾಠೋಡ ನಾಲತವಾಡ ವಿಜಯಪುರ

info.reporterkarnataka@gmail.com

ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ನನ್ನನ್ನು ಸೋಲಿಸಿದರು. ನಾನಾರಿಗೂ ಮೋಸ ಮಾಡಿಲ್ಲದಿರುವುದೇ ನನ್ನ ಸಾಧನೆ. ಮೂರು ಬಾರಿ ನಿಮ್ಮ ಪ್ರತಿನಿಧಿಯಾಗಿ ವಿಧಾನಸಭೆ ಪ್ರವೇಶಿಸುವ ಅವಕಾಶವನ್ನು ಕೊಟ್ಟಿದ್ದಿರಿ. ಭಯ್ಯಾ ಬಯ್ಯಾ ಬಗಲಮೇ ಚೂರಿ ಎಂದು ತಿಳಿದವರು ನನ್ನನ್ನು ಸೋಲಿಸಿದರು, ನನಗೆ ಅಧಿಕಾರದ ಆಶೆಯ ಹುಚ್ಚಿಲ್ಲ, ನಾನು ಸೋತಾಗ ಐದು ವರ್ಷಗಳ ನಿಮ್ಮ ಸೇವೆ ಮಾಡುವ ಅವಕಾಶದಿಂದ ವಂಚಿತನಾದೆ ಎಂಬ ನೋವು ಒಂದು ಕ್ಷಣ ಕಾಡಿತು ಎಂದು ಕರ್ನಾಟಕ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.


ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡದ ಸ್ಥಳೀಯ ರತ್ನ ಸಂಗಮ ಮಂಗಲ ಕಾರ್ಯಾಲಯದಲ್ಲಿ ಚಂದ್ರಶೇಖರ ಗಂಗನಗೌಡ್ರ ಗೆಳೆಯರ ಬಳಗದಡಿ ಹಮ್ಮಿಕೊಂಡಿದ್ದ ತಮ್ಮ 55ನೇ ಹುಟ್ಟುಹಬ್ಬ ಹಾಗೂ ಸಮಾಜ ಸೇವಕ ಚಂದ್ರಶೇಖರ ಗಂಗನಗೌಡ ಅವರ 45ನೇ ಹುಟ್ಡುಹಬ್ಬ ಆಚರಣೆಯ ಸಮಾರಂಭದಲ್ಲಿ ಮಾತನಾಡಿದರು.
ಎರಡು ಅಣೆಕಟ್ಟಿನ ನಡುವಿನ ಬಂಗಾರದ ಭೂಮಿಯಿದ್ದು, ಬಂಗಾರದ ಬೆಳೆ ಬೆಳೆ ಬೆಳೆಯಬೇಕು. ಭೂಮಿ ಇದ್ದವನೇ ಸಿರಿವಂತ ಎಂದು ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು.
ಇದಕ್ಕೂ ಮೊದಲು ವೀರೇಶ್ವರ ಶರಣರ ಮಹಾಮನೆಯಲ್ಲಿ ಶರಣರಿಗೆ ಹಾಗೂ ಗೋ ಮಾತೆಗೆ ಪೂಜೆ ಸಲ್ಲಿಸಿದರು, ಡಾ.ಬಾಬಾಸಾಹೇಬ್ ಅಂಬೇಡ್ಕರ್, ಶರಣ ವೀರೇಶ್ವರರ, ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣಿ ಮಾಡಿ ಶರಣರ ಮಠದಿಂದ ಮೆರವಣಿಗೆ ಮೂಲಕ ಕಾರ್ಯಕ್ರಮದ ಸ್ಥಳಕ್ಕೆ ಬಂದರು. ಕೆಂಚಪ್ಪ ಬಿರಾದಾರ, ಎಂ.ಎಸ್.ಪಾಟೀಲ, ಮುತ್ತು ಅಂಗಡಿ, ಮುನ್ನಾಧಣಿ ನಾಡಗೌಡ್ರ, ಗಿರೀಶ್ ಪಾಟೀಲ ಮಾತನಾಡಿದರು.
ರಾಜು ಹಾದಿಮನಿ ಕಾರ್ಯಕ್ತಮ ನಿರೂಪಿಸಿ ವಂದಿಸಿದರು. ಬಿಜೆಪಿ ಮುಖಂಡ ಬಿ.ಎಂ.ತಾಳಿಕೋಟಿ ವಕೀಲರು ಸೇರಿದಂತೆ ಸಾವಿರಾರು ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು