3:20 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು