7:43 AM Thursday3 - July 2025
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,…

ಇತ್ತೀಚಿನ ಸುದ್ದಿ

ಬೆಂಗಳೂರು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯ: ಎಂಸಿಎ ವಿದ್ಯಾರ್ಥಿಗಳ 2ನೇ ಬ್ಯಾಚ್‌ಗೆ ಓರಿಯಂಟೇಶನ್ ಕಾರ್ಯಕ್ರಮ

25/07/2024, 19:13

ಬೆಂಗಳೂರು(reporterkarnataka.com): ಇಲ್ಲಿನ ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಎಂಸಿಎ ವಿದ್ಯಾರ್ಥಿಗಳ ಎರಡನೇ ಬ್ಯಾಚ್‌ನ ಓರಿಯಂಟೇಶನ್ ಇತ್ತೀಚೆಗೆ ನಡೆಯಿತು.


ಸ್ಕೂಲ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿಯ ಡೀನ್ ಮತ್ತು ನಿರ್ದೇಶಕರಾದ ಫಾದರ್ ಡೆನ್ಜಿಲ್ ಲೋಬೋ ಎಸ್.ಜೆ. ಅವರು ನೂತನ ವಿದ್ಯಾರ್ಥಿಗಳಿಗೆ ಆಶೀರ್ವಾದವನ್ನು ಕೋರುವ ಮೂಲಕ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ಅವರು ಸ್ವಾಮಿ ವಿವೇಕಾನಂದರನ್ನು ಉಲ್ಲೇಖಿಸಿ, “ನೀವು ನಿಮ್ಮಲ್ಲಿ ನಂಬಿಕೆಯನ್ನು ಹೊಂದಿರಬೇಕು, ಏಕೆಂದರೆ ಆ ನಂಬಿಕೆಯು ಆಂತರಿಕ ದೈವತ್ವವನ್ನು ನೀಡುತ್ತದೆ. ನೀವು ಏನು ಬೇಕಾದರೂ ಮಾಡಬಹುದು; ನಿಮಗೆ ನಂಬಿಕೆ ಇಲ್ಲದಿದ್ದಾಗ ಮಾತ್ರ ನೀವು ವಿಫಲರಾಗುತ್ತೀರಿ,” ಎಂದರು.
ಫಾ. ಡೆನ್ಜಿಲ್ ಅವರು ಸ್ನಾತಕೋತ್ತರ ಅಧ್ಯಯನದ ಸವಾಲುಗಳನ್ನು ಸ್ವೀಕರಿಸಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮದ ಮಹತ್ವವನ್ನು ತಿಳಿ ಹೇಳಿದರು.
ಜಾಗತಿಕವಾಗಿ ಜೆಸ್ಯೂಟ್ ಸಂಸ್ಥೆಗಳ ಇತಿಹಾಸವನ್ನು ಪ್ರಸ್ತುತಪಡಿಸಿ, ಜೆಸ್ಯೂಟ್ ಶೈಕ್ಷಣಿಕ ತತ್ತ್ವಶಾಸ್ತ್ರವನ್ನು ವಿವರಿಸಿದರು.
ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಮೆಲ್ವಿನ್ ಕೊಲಾಕೊ ಅವರು ಹೊಸ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಡಾ. ಮೋಹನದಾಸ SJU ನಲ್ಲಿ ಪರೀಕ್ಷಾ ವ್ಯವಸ್ಥೆಯನ್ನು ವಿವರಿಸಿದರು.
ವಿದ್ಯಾರ್ಥಿ ಸಂಯೋಜಕರಾದ ಜಾನ್ ವಿಸ್ಟನ್, ಸಂಸ್ಥೆಯ ಚಟುವಟಿಕೆಗಳಲ್ಲಿ ಭಾಗವಹಿಸುವ ಪ್ರಯೋಜನಗಳ ವಿವರವನ್ನು ನೀಡಿದರು. ಡಾ.ಮುಯಿನ್ ಪಾಷಾ ಅವರು ಗಣ್ಯರು, ವಿದ್ಯಾರ್ಥಿಗಳು ಮತ್ತು ಅತಿಥಿಗಳನ್ನು ಓರಿಯಂಟೇಶನ್ ಕಾರ್ಯಕ್ರಮಕ್ಕೆ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು