3:55 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಮರೋಳಿ ಡೇಂಜರ್ ಟ್ರೀಯ ಕೊಂಬೆ ಮುರಿತ: ಮರ ತೆರವಿಗೆ ಇನ್ನೂ ಅಧಿಕಾರಿಗಳ ಮೀನಮೇಷ!

26/07/2024, 18:49

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಮಂಗಳೂರಿನ ಮರೋಳಿ ಸೂರ್ಯನಾರಾಯಣ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿರುವ ಹಳೆಯ ಮರದ ಅಪಾಯದ ಕುರಿತು ನಾಲ್ಕೈದು ದಿನಗಳ ಹಿಂದೆಯಷ್ಟೇ ರಿಪೋರ್ಟರ್ ಕರ್ನಾಟಕ ವರದಿ ಮಾಡಿತ್ತು. ಸರಕಾರಿ ಇಲಾಖೆಗಳ ನಡುವಿನ ಸಮನ್ವಯತೆ ಕೊರತೆಯಿಂದ ಅಪಾಯಕಾರಿ ಮರವೊಂದನ್ನು ಬಗಲಿನಲ್ಲೇ ಇಟ್ಟುಕೊಂಡು ಸ್ಥಳೀಯರು ಹೇಗೆ ಬದುಕು ನಡೆಸುತ್ತಿದ್ದಾರೆ ಎನ್ನುವ ಕುರಿತು ವಿವರಿಸಲಾಗಿತ್ತು. ಇದೀಗ ಗಾಳಿ ಮಳೆಗೆ ಮರದ ಕೊಂಬೆ ಬಿದ್ದಿದೆ. ಆದರೆ ಸರಕಾರಿ ಅಧಿಕಾರಿಗಳು ಇನ್ನೂ ಎಚ್ಚೆತ್ತುಕೊಂಡಿಲ್ಲ.
ಸರಕಾರಿ ಇಲಾಖೆಗಳ ನಡುವೆ ಎಷ್ಟು ಸಮನ್ವಯತೆ ಕೊರತೆ ಇದೆ ಎನ್ನುವುದಕ್ಕೆ ಇದೊಂದು ತಾಜಾ ನಿದರ್ಶನ. ಹಳೆಯ ಈ ಮರ ಯಾವುದೇ ಕ್ಷಣದಲ್ಲಿ ಧರಾಶಾಹಿಯಾಗಿ ದಾರಿಹೋಕರಿಗೆ ಅಪಾಯ ಉಂಟು ಮಾಡುವ ಸಾಧ್ಯತೆಗಳಿದ್ದರೂ ಅಧಿಕಾರಿಗಳು ಮಾತ್ರ ತನ್ನದ್ದಲ್ಲ ತನ್ನದ್ದಲ್ಲ ಅಂತ ಮುಖ ತಿರುಗಿಸಿಕೊಳ್ಳುತ್ತಿದ್ದಾರೆ. ಸ್ಥಳೀಯ ಕಾರ್ಪೋರೇಟರ್ ಅಂತೂ ಊರಲ್ಲಿದ್ದಾರೆಯೇ? ಅಥವಾ ವಿದೇಶಕ್ಕೆ ಹೋಗಿದ್ದಾರಾ? ಎನ್ನುವ ಸಂಶಯ ಕಾಡುತ್ತಿದೆ.

ಮರೋಳಿ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಈ ಹಳೆಯ ಮರದ ಕೊಂಬೆ ಬೀಳುವ ಸ್ಥಿತಿಯಲ್ಲಿದೆ ಎಂದು ರಿಪೋರ್ಟರ್ ಕರ್ನಾಟಕ ವರದಿ ಮಾಡಿತ್ತು. ಮೆಸ್ಕಾಂ ಹಾಕಿರುವ ಡಮ್ಮಿ ತಂತಿಗೆ ಕೊಂಬೆ
ತಾಗಿ ಇತ್ತು. ಮರದ ಪಕ್ಕದಲ್ಲೇ ಅಂಗನವಾಡಿ ಕೇಂದ್ರವಿದೆ. ಅಂಗನವಾಡಿಗೆ ತೆರಳುವ ಮಕ್ಕಳು ಇದೇ ಮರದಡಿಯಿಂದ ಹಾದು ಹೋಗಬೇಕಾಗಿದೆ. ಸುತ್ತ 50 ಮನೆಗಳಿದ್ದು ಅದೇ ದಾರಿ ದೇವಸ್ಥಾನ ಹಾಗೂ ನಾಗುರಿ ಮತ್ತು ಹೈವೇ ಗೆ ಬಂದು ಸೇರುತ್ತದೆ. ಹೀಗಿರುವಾಗ ಯಾವಾಗ ಮರ ಮೈಮೇಲೆ ಬೀಳುತ್ತೋ ಎನ್ನುವ ಆತಂಕ ಸುತ್ತ ಮುತ್ತ ಜನರದ್ದಾಗಿದೆ. ಈ ಮರ ದಾಟಿ ಶಾಲಾ ಬಸ್ಸುಗಳು ಬರಲು ಒಪ್ಪುತ್ತಿಲ್ಲ. ಮಕ್ಕಳೇ ನಡೆದುಕೊಂಡು ಹೋಗಬೇಕಾಗಿದೆ. ಸ್ಥಳೀಯರು ಸ್ಥಳೀಯ ಕಾರ್ಪೋರೇಟರ್ ಬಳಿ ಅಲವತ್ತು ಕೊಂಡರೂ ಪ್ರಯೋಜನವಾಗಿಲ್ಲ.
ಪಾಲಿಕೆ ವಿದ್ಯುತ್ ವಿಭಾಗದ ಸಂಬಂಧಪಟ್ಟವರು ಬಂದು ನಮಗೆ ಆಗಲ್ಲ ಮೆಸ್ಕಾಂ ತಂತಿ ಇದೆ ಎನ್ನುತ್ತಾರೆ. ಮೆಸ್ಕಾಂಗೆ ಹೇಳಿದರೆ, ಮೆಸ್ಕಾಂ ಸಿಬ್ಬಂದಿಗಳು ಅರಣ್ಯ ಇಲಾಖೆಯತ್ತ ಬೆರಳು ತೋರಿಸುತ್ತಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಗಮನವೇ ಹರಿಸುತ್ತಿಲ್ಲ. ಇನ್ನು ಇದಲ್ಲದೆ ಸುತ್ತಮುತ್ತ ಚಾಲ್ತಿಯಲ್ಲಿರುವ ಮೆಸ್ಕಾಂ ತಂತಿಗೆ ತಾಗಿ ಮರಗಳ ಕೊಂಬೆಗಳಿವೆ. ಇದೀಗ ಒಂದು ಕೊಂಬೆ ಮುರಿದು ಬಿದ್ದಿದೆ. ಆದರೂ ಮರ ಇನ್ನೂ ಅಪಾಯದ ಸ್ಥಿತಿಯಲ್ಲಿದೆ. ಅದರೆ, ಕಾರ್ಪೊರೇಟರ್ ಆಗಲಿ, ಅಧಿಕಾರಿಗಳಾಗಲಿ ಕ್ಯಾರೇ ಎನ್ನುತ್ತಿಲ್ಲ. ಪಾಂಡೇಶ್ವರದಲ್ಲಿ ಇತ್ತೀಚೆಗೆ ವಿದ್ಯುತ್ ತಂತಿ ತಗುಲಿ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ ಬಳಿಕ ಸಭೆ ನಡೆಸಿದ ಸ್ಪೀಕರ್ ಯು. ಟಿ. ಖಾದರ್ ಅವರು ಮೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಆದರೆ ಯಾವುದೂ ಇದುವರೆಗೆ ಫಲ ನೀಡಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು