3:23 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿ: ಕೇಂದ್ರ ಸಚಿವ ನಾರಾಯಣ ರಾಣೆ ಬಂಧನ

24/08/2021, 17:38

ಮುಂಬೈ(reporterkarnataka.com): ಬಿಜೆಪಿ ಮತ್ತು ಶಿವಸೇನೆಯ ನಡುವೆ ಮತ್ತೆ ಜಟಾಪಟಿ ಶುರುವಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕುರಿತು ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಎಂದು ರಾಣೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ 4 ಪ್ರಕರಣ ದಾಖಲಿಸಲಾಗಿದೆ. ಪುಣೆ ಹಾಗೂ ನಾಸಿಕ್ ನಲ್ಲಿ ತಲಾ ಒಂದು ಪ್ರಕರಣ ಹಾಗೂ ರಾಯಗಢ ಜಿಲ್ಲೆಯಲ್ಲಿ ಎರಡು ಪ್ರಕರಣಗಳು

ದಾಖಲಾಗಿದೆ.

ನಾರಾಯಣ ರಾಣೆ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಂತರ ಕಾಯ್ದುಕೊಂಡಿದೆ. ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರತಿಕ್ರಿಯಿಸಿ, ರಾಣೆ ಅವರು ಮುಖ್ಯಮಂತ್ರಿ ಬಗ್ಗೆ ಮಾತನಾಡುವಾಗ ಸಂಯಮ ತೋರಿಸಬೇಕಿತ್ತು ಎಂದಿದ್ದಾರೆ.

ಈ ನಡುವೆ ರಾಣೆ ಅವರು ತನ್ನ ವಿರುದ್ಧ ಎಫ್ ಐಆರ್ ರದ್ದುಗೊಳಿಸುವಂತೆ ಬಾಂಬೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಅಥವಾ ಯಾವುದೇ ಬಲವಂತದ ಕ್ರಮದಿಂದ ರಕ್ಷಣೆ ನೀಡುವಂತೆ ಮಧ್ಯಂತರ ಆದೇಶ ಕೋರಿದ್ದಾರೆ.

ನಾರಾಯಣ ರಾಣೆ ಈ ಹಿಂದೆ ಶಿವಸೇನೆಯಲ್ಲಿದ್ದು, ಮುಖ್ಯಮಂತ್ರಿಯಾಗಿದ್ದರು. ನಂತರ ಕಾಂಗ್ರೆಸ್ ಗೆ ಪಕ್ಷಾಂತರಗೊಂಡಿದ್ದರು. ನಂತರ ಬಿಜೆಪಿ ಸೇರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು