3:05 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ

27/07/2024, 00:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.


ಹೊಂಡದಲ್ಲಿ ಮಳೆಯ ನೀರು ತುಂಬಿ ರಸ್ತೆ ಪಕ್ಕದಲ್ಲಿ ಓಡಾಟ ನಡೆಸುವ ಜನರಿಗೆ ವಾಹನಗಳ ಓಡಾಟದಿಂದ ಮಳೆ ನೀರು ಸಿಂಪಡಣೆ ಆಗುತ್ತಿದೆ. ಕೊಳಚೆ ನೀರು ಜನರಿಗೆ ಎರಚುತ್ತಿರುವುದರಿಂದ ಮಳೆಗಾಲದಲ್ಲಿ ಇದೊಂದು ಹೊಸ ಭಾಗ್ಯ ಎಂದು ಗೊಣಗುತ್ತಾ ಓಡಾಡುತ್ತಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ದಿನದಿಂದ ಈ ಹೊಂಡ ಬಾಯಿ ತೆರೆದು ಕೊಳಚೆ ನೀರು ತುಂಬಿಕೊಂಡು ಪ್ರತಿನಿತ್ಯ ಓಡಾಟ ನಡೆಸುವ ಜನರಿಗೆ ಸಮಸ್ಯೆ ಆಗುತ್ತಿದ್ದರು ಒಂದು ಬುಟ್ಟಿ ಮಣ್ಣು ಹಾಕಿ ಸುಮ್ಮನಾಗಿದ್ದರು. ಈಗ ಮತ್ತೆ ಬಾಯಿ ತೆರೆದಿದ್ದು ಇದುವರೆಗೂ ಅದನ್ನು ಮುಚ್ಚಬೇಕು ಎಂದು ಯಾರು ಕೂಡ ನೋಡಿಲ್ಲ.
ಅದೇ ರಸ್ತೆಯಲ್ಲಿ ಅಧಿಕಾರಿಗಳನ್ನು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಓಡಾಟ ನಡೆಸುತ್ತಾರೆ. ಆದರೆ ಇಲ್ಲಿಯವರೆಗೂ ಅವರ ಕಣ್ಣಿಗೆ ಈ ಬೃಹತ್ ಆಕಾರದ ಹೊಂಡ ಬಿದ್ದಿರುವುದು ಕಾಣದೇ ಇರುವುದು ವಿಷಾದನಿಯ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಹೊಂಡ ಮುಚ್ಚಿಸಿ ಯಾವುದೇ ಕೊಳಚೆ ನೀರು ಹಾರದಂತೆ ಜನರಿಗೆ ಓಡಾಟ ನಡೆಸಲು ಅವಕಾಶ ಮಾಡಿಕೊಡುತ್ತಾರ? ಎಂದು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು