2:14 AM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಕೊಪ್ಪ ಸರ್ಕಲ್ ನಲ್ಲಿ ಬಲಿಗಾಗಿ ಕಾಯುತ್ತಿದೆ ಮೃತ್ಯುಕೂಪ!; ಇನ್ನಾದರೂ ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಲಿ

27/07/2024, 00:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169 ರ ಕೊಪ್ಪ ಸರ್ಕಲ್ ನಲ್ಲಿ ಭಾರಿ ಗಾತ್ರದ ಹೊಂಡ ಗುಂಡಿಯೊಂದು ರಸ್ತೆ ಮಧ್ಯದಲ್ಲಿ ಬಾಯಿ ತೆರದು ಅಪಾಯಕ್ಕೆ ಅಹ್ವಾನ ನೀಡುತ್ತಿದೆ.


ಹೊಂಡದಲ್ಲಿ ಮಳೆಯ ನೀರು ತುಂಬಿ ರಸ್ತೆ ಪಕ್ಕದಲ್ಲಿ ಓಡಾಟ ನಡೆಸುವ ಜನರಿಗೆ ವಾಹನಗಳ ಓಡಾಟದಿಂದ ಮಳೆ ನೀರು ಸಿಂಪಡಣೆ ಆಗುತ್ತಿದೆ. ಕೊಳಚೆ ನೀರು ಜನರಿಗೆ ಎರಚುತ್ತಿರುವುದರಿಂದ ಮಳೆಗಾಲದಲ್ಲಿ ಇದೊಂದು ಹೊಸ ಭಾಗ್ಯ ಎಂದು ಗೊಣಗುತ್ತಾ ಓಡಾಡುತ್ತಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ದಿನದಿಂದ ಈ ಹೊಂಡ ಬಾಯಿ ತೆರೆದು ಕೊಳಚೆ ನೀರು ತುಂಬಿಕೊಂಡು ಪ್ರತಿನಿತ್ಯ ಓಡಾಟ ನಡೆಸುವ ಜನರಿಗೆ ಸಮಸ್ಯೆ ಆಗುತ್ತಿದ್ದರು ಒಂದು ಬುಟ್ಟಿ ಮಣ್ಣು ಹಾಕಿ ಸುಮ್ಮನಾಗಿದ್ದರು. ಈಗ ಮತ್ತೆ ಬಾಯಿ ತೆರೆದಿದ್ದು ಇದುವರೆಗೂ ಅದನ್ನು ಮುಚ್ಚಬೇಕು ಎಂದು ಯಾರು ಕೂಡ ನೋಡಿಲ್ಲ.
ಅದೇ ರಸ್ತೆಯಲ್ಲಿ ಅಧಿಕಾರಿಗಳನ್ನು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಓಡಾಟ ನಡೆಸುತ್ತಾರೆ. ಆದರೆ ಇಲ್ಲಿಯವರೆಗೂ ಅವರ ಕಣ್ಣಿಗೆ ಈ ಬೃಹತ್ ಆಕಾರದ ಹೊಂಡ ಬಿದ್ದಿರುವುದು ಕಾಣದೇ ಇರುವುದು ವಿಷಾದನಿಯ.
ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿ ಹೊಂಡ ಮುಚ್ಚಿಸಿ ಯಾವುದೇ ಕೊಳಚೆ ನೀರು ಹಾರದಂತೆ ಜನರಿಗೆ ಓಡಾಟ ನಡೆಸಲು ಅವಕಾಶ ಮಾಡಿಕೊಡುತ್ತಾರ? ಎಂದು ಕಾದು ನೋಡಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು