3:04 AM Sunday2 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು