7:01 PM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು