12:48 PM Saturday10 - January 2026
ಬ್ರೇಕಿಂಗ್ ನ್ಯೂಸ್
ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ ಪದಾಧಿಕಾರಿಗಳ ಪದಗ್ರಹಣ

27/07/2024, 16:29

ಮಂಗಳೂರು(reporterkarnataka.com): ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ 2024-26ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಹೋಟೆಲ್ ದೀಪಾ ಕಂಫರ್ಟ್ ನಲ್ಲಿ ಜರಗಿತು.
ಅಧ್ಯಕ್ಷರಾಗಿ ಟಾಲಿ ಕಂಪ್ಯೂಟರ್ಸ್ ಮಾಲಕರಾದ ಜಗದೀಶ್ ಅಧಿಕಾರ ಸ್ವೀಕರಿಸಿದರು. ಉಪಾಧ್ಯಕ್ಷರಾಗಿ ಶ್ರೀ ಭಾರತಿ ಸಿಸ್ಟಮ್ಸನ ಮಾಲಕರಾದ ಶಂಕರನಾರಾಯಣ ಕಾರಂತ್, ಕಾರ್ಯದರ್ಶಿಯಾಗಿ ಡಿಯೊ ಟೆಕ್ ಗ್ಲೋಬಲ್‌ನ ಪಾಲುದಾರರಾದ ರವಿ ಭಟ್, ಖಜಾಂಚಿಯಾಗಿ ಚತುರ್ ಟೆಕ್ನಾಲಜಿಸ್‌ ಮಾಲಕರಾದ ಜಯಪ್ರಕಾಶ್ ಹಾಗೂ ಜೊತೆ ಕಾರ್ಯದರ್ಶಿಯಾಗಿ ಶ್ರೀನಿಧಿ ಸಿಸ್ಟಮ್ಸನ ಮಾಲಕರಾದ ರಾಜೇಶ್ ಅಧಿಕಾರ ಸ್ವೀಕರಿಸಿದರು.
ಕಾರ‍್ಯಕಾರಿ ಸಮಿತಿಯ ಸದಸ್ಯರಾಗಿ ಆರ್ಯ ಎಂಟರ್‌ಪ್ರೈಸಸ್‌ನ ನಿರ್ದೆಶಕರಾದ ಮುರಳಿ ಎಚ್., ಸಾಫ್ಟ್ ಲಿಂಕ್ ಮಾಲಕರಾದ ಗಣೇಶ್, ಐ ಕೇರ್ ಕಂಪ್ಯೂಟರ್ಸ್ ಮಾಲಕರಾದ ಲೋಕೇಶ್, ಇಲೆಕ್ಟೊçಟೆಕ್ ಸಿಸ್ಟಮ್ಸ್ ಪಾಲುದಾರರಾದ ಭರತ್ ಶೆಟ್ಟಿ, ಎ.ಎನ್. ಎಂಟರ್‌ಪ್ರೈಸಸ್‌ನ ಪಾಲುದಾರರಾದ ನಿರಂಜನ್ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿ ತಮ್ಮ ನಿರ್ಗಮನ ಭಾಷಣದಲ್ಲಿ ಸಂಸ್ಥೆಯ ಕಳೆದ ಅವಧಿಯ ಕರ‍್ಯಕ್ರಮಗಳ ವಿವರಗಳನ್ನು ನೀಡಿದರು.
ಅಧಿಕಾರ ವಹಿಸಿಕೊಂಡ ಅಧ್ಯಕ್ಷರಾದ ಜಗದೀಶ್ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದರು.
ಕಾರ‍್ಯಕ್ರಮದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಭರತ್ ಶೆಟ್ಟಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು ಮತ್ತು ಭಾರತೀಯ ಜನತಾ ಪಕ್ಷದ ಶಿಕ್ಷಣ ಪ್ರಕೋಷ್ಟದ ರಾಜ್ಯ ಸದಸ್ಯರಾಗಿ ಆಯ್ಕೆಯಾದ ಮುರಳಿ ಎಚ್. ಅವರನ್ನು ಗೌರವಿಸಲಾಯಿತು.
ಮಂಗಳೂರು ಕಂಪ್ಯೂಟರ್ ವಿತರಕರ ಸಂಘದ (ಎಮ್‌ಐಟಿಡಿಎ) ಪೂರ್ವಧ್ಯಕ್ಷರಾದ ಗೋಪಿನಾಥ್, ಕೇತನ್ ಚಂದ್ರಾನ, ಸಾಯಿ ರಾವ್ ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
ಶಂಕರ್ ನಾರಾಯಣ ಪ್ರಾರ್ಥನೆ ನೆರವೇರಿಸಿದರು, ಜಗದೀಶ್ ಸ್ವಾಗತಿಸಿದರು. ರವಿ ಭಟ್ ವಂದನಾರ್ಪಣೆ ಸಲ್ಲಿಸಿದರು. ಮುರಳಿ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು