6:55 PM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮರ ಬಿದ್ದು ಯುವಕ ಸಾವು: ಶವಾಗಾರದಿಂದಲೇ ಅರಣ್ಯ ಇಲಾಖೆ ಬೇಜವಾಬ್ದಾರಿ ಕುರಿತು ಅಧಿಕಾರಿಗಳಿಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ತರಾಟೆ

27/07/2024, 21:19

ರಶ್ಮಿ ಶ್ರೀಕಾಂತ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಬೈಕ್ ನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಆಕೇಶಿಯಾ ಮರ ಬಿದ್ದು ಸಾವನ್ನಪ್ಪಿದ ಪ್ರಕರಣ ಕುರಿತು ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿ ಕುರಿತು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ತೀರ್ಥಹಳ್ಳಿಯ ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ ಸಮೀಪ ಮೀನ್ಮನೆಕೊಪ್ಪ ಸಚಿನ್ (26) ಎಂಬ ಯುವಕನ ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿ ಭಾಗಿ ನಿಂತ ಆಕೇಶಿಯ ಮರ ತಲೆಯಮೇಲೆ ಬಿದ್ದು ಸಾವನ್ನಪ್ಪಿದ್ದರು. ಈ ರಸ್ತೆ ಅಕ್ಕ ಪಕ್ಕದಲ್ಲಿ ಬೆಳೆದು ನಿಂತಿರುವ ಅಕೇಶಿಯಾ ಮರಗಳ ಬಗ್ಗೆ ಹತ್ತಾರು ಭಾರಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿವಿಧ ಸಭೆಗಳಲ್ಲಿ ಹೇಳಿದ್ದರೂ ಕೂಡಾ ರಸ್ತೆ ಬದಿ ವಾಲಿ ನಿಂತ ಆಕೇಶಿಯಾ ಮರಗಳನ್ನು ತೆರವು ಗೊಳಿಸದೇ ಜೀವ ಹಾನಿಗೆ ಕಾರಣವಾದ ಅರಣ್ಯ ಇಲಾಖೆ ಅಧಿಕಾರಿಗಳ ಕ್ರಮವನ್ನು ಖಂಡಿಸಿ ಶಾಸಕರು ಪಟ್ಟಣದ ಜೆಸಿ ಆಸ್ಪತ್ರೆ ಶವಗಾರದಲ್ಲಿ ಮರಣ ಹೊಂದಿದ ಯುವಕನ ಅಂತಿಮ ದರ್ಶನ ಪಡೆದು ಸ್ಥಳದಿಂದಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾತನಾಡಿ ತರಾಟೆಗೆ ತೆಗೆದುಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು