12:04 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ ಆಚರಣೆ

28/07/2024, 13:35

ಮಂಗಳೂರು(reporterkarnataka.com): ನಗರದ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜು 5 KAR ಎನ್ ಸಿ ಸಿ ನೌಕಾ ಉಪಘಟಕದ ವತಿಯಿಂದ 25ನೇ ಕಾರ್ಗಿಲ್ ವಿಜಯೋತ್ಸವ – 2024 ಆಚರಿಸಲಾಯಿತು.
ಎನ್ ಸಿಸಿ ಅಧಿಕಾರಿ LT. CDr ಡಾ.ಯತೀಶ್ ಕುಮಾರ್ ಮಾತನಾಡಿ, ಕಾರ್ಗಿಲ್ ವಿಜಯೋತ್ಸವ ದಿನದ ಮಹತ್ವವನ್ನು ಅವರು ಕೆಡಿಟ್ ಗಳಿಗೆ ಮನವರಿಕೆ ಮಾಡಿದರು.
ಎಲ್ಲಕ್ಕಿಂತ ಹೆಚ್ಚಾಗಿ ಸೈನಿಕನು ಶಾಂತಿಗಾಗಿ ಪ್ರಾರ್ಥಿಸುತ್ತಾನೆ. ಏಕೆಂದರೆ ಸೈನಿಕನು ನರಳಬೇಕು ಮತ್ತು ಆಳವಾದ ಗಾಯಗಳನ್ನು ಸಹಿಸಿಕೊಳ್ಳಬೇಕು. ನಾವು ನೀವೆಲ್ಲರೂ ಸೈನಿಕರ ಆರೋಗ್ಯಕ್ಕಾಗಿ ದಿನ ನಿತ್ಯ ಪ್ರಾಥಿಸಬೇಕು ಎಂದು ಅವರು ಕರೆ ನೀಡಿದರು.


ವಿವಿ ಕಾಲೇಜಿನ ಎನ್.ಸಿ.ಸಿ ನೌಕ ವಿಭಾಗದ ಕೆಡೆಟ್‌ಗಳಿಗೆ ಪ್ರಬಂಧ ಬರವಣಿಗೆ ಮತ್ತು ಕವನ ಸ್ಪರ್ಧೆಯನ್ನು ನಡೆಸಲಾಯಿತು.
ನಂತರ ಸ್ವಚ್ಛ ಭಾರತ ಎಂಬ ಕಾರ್ಯಕ್ರಮವನ್ನು ನಡೆಸಲಾಯಿತು. ಕೆಡೆಟ್‌ಗಳು ಕಾಲೇಜಿನ ಆವರಣವನ್ನು ಸ್ವಚ್ಛಗೊಳಿಸಿದರು.
ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು