2:29 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ನಂಜನಗೂಡು: ಕೇಂದ್ರ ಸಚಿವ ಕುಮಾರಸ್ವಾಮಿಗೆ ಐಬಿ ಬಾಗಿಲು ತೆರೆಯದ ಅಧಿಕಾರಿಗಳು!; ಕಾರಿನಲ್ಲೇ ಕೂತು ವಾಪಸ್ ತೆರಳಿದ ಎಚ್ ಡಿಕೆ!!

28/07/2024, 13:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆ ನಂಜನಗೂಡು ದೇವಾಲಯಕ್ಕೆ ತೆರಳಿದ ಸಂದರ್ಭ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದಾಗ ಅಲ್ಲಿ ಅವರಿಗೆ ಕೊಠಡಿ ದೊರಕದ ಘಟನೆ ನಡೆದಿದೆ.
ಕೇಂದ್ರ ಸಚಿವರ ನಂಜನಗೂಡು ಪ್ರವಾಸದ ವಿಚಾರವನ್ನು ಅಧಿಕಾರಿಗಳಿಗೆ ತಿಳಿಸಲಾಗಿತ್ತು.

ಈ ಬಗ್ಗೆ ಪ್ರವಾಸ ಪಟ್ಟಿಯನ್ನು ಸಚಿವಾಲಯದ ಅಧಿಕಾರಿಗಳು
ಬಿಡುಗಡೆ ಮಾಡಿದ್ದರು.
ಈ ನಡುವೆ ವಿಶ್ರಾಂತಿಗಾಗಿ ಕುಮಾರಸ್ವಾಮಿ ಅವರು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.
ಆದರೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು.
10 ನಿಮಿಷ ಕಾದರು ಬಾಗಿಲು ತೆಗೆಯಲು ಸಿಬ್ಬಂದಿಗಳು ಆಗಮಿಸಿಲ್ಲ. ನಂತರ ಕುಮಾರಸ್ವಾಮಿ ಅವರು
ವಾಪಸ್ಸು ತೆರಳಿದರು.
ಈ ಬಗ್ಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿ ಅವರು ಕಾರಿನಲ್ಲೆ ಕುಳಿತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು