7:51 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ನಂಜನಗೂಡು: ಕೇಂದ್ರ ಸಚಿವ ಕುಮಾರಸ್ವಾಮಿಗೆ ಐಬಿ ಬಾಗಿಲು ತೆರೆಯದ ಅಧಿಕಾರಿಗಳು!; ಕಾರಿನಲ್ಲೇ ಕೂತು ವಾಪಸ್ ತೆರಳಿದ ಎಚ್ ಡಿಕೆ!!

28/07/2024, 13:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡ ಹಿನ್ನೆಲೆ ನಂಜನಗೂಡು ದೇವಾಲಯಕ್ಕೆ ತೆರಳಿದ ಸಂದರ್ಭ ವಿಶ್ರಾಂತಿಗಾಗಿ ನಂಜನಗೂಡು ಪ್ರವಾಸಿ ಮಂದಿರಕ್ಕೆ ತೆರಳಿದಾಗ ಅಲ್ಲಿ ಅವರಿಗೆ ಕೊಠಡಿ ದೊರಕದ ಘಟನೆ ನಡೆದಿದೆ.
ಕೇಂದ್ರ ಸಚಿವರ ನಂಜನಗೂಡು ಪ್ರವಾಸದ ವಿಚಾರವನ್ನು ಅಧಿಕಾರಿಗಳಿಗೆ ತಿಳಿಸಲಾಗಿತ್ತು.

ಈ ಬಗ್ಗೆ ಪ್ರವಾಸ ಪಟ್ಟಿಯನ್ನು ಸಚಿವಾಲಯದ ಅಧಿಕಾರಿಗಳು
ಬಿಡುಗಡೆ ಮಾಡಿದ್ದರು.
ಈ ನಡುವೆ ವಿಶ್ರಾಂತಿಗಾಗಿ ಕುಮಾರಸ್ವಾಮಿ ಅವರು ಪ್ರವಾಸಿ ಮಂದಿರಕ್ಕೆ ತೆರಳಿದ್ದರು.
ಆದರೆ ಪ್ರವಾಸಿ ಮಂದಿರದ ಬಾಗಿಲಿಗೆ ಬೀಗ ಹಾಕಲಾಗಿತ್ತು.
10 ನಿಮಿಷ ಕಾದರು ಬಾಗಿಲು ತೆಗೆಯಲು ಸಿಬ್ಬಂದಿಗಳು ಆಗಮಿಸಿಲ್ಲ. ನಂತರ ಕುಮಾರಸ್ವಾಮಿ ಅವರು
ವಾಪಸ್ಸು ತೆರಳಿದರು.
ಈ ಬಗ್ಗೆ ಮಾಜಿ ಸಚಿವ ಸಾ.ರಾ.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿ ಅವರು ಕಾರಿನಲ್ಲೆ ಕುಳಿತಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು