1:12 AM Wednesday12 - November 2025
ಬ್ರೇಕಿಂಗ್ ನ್ಯೂಸ್
ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ‘ಚಾರೊಳಿ’ 1000ದ ಸಂಭ್ರಮ: ಹಲವು ರಾಜ್ಯಗಳ ಕವಿಗಳು ಭಾಗಿ

28/07/2024, 17:36

ಮಂಗಳೂರು(reporterkarnataka.com): ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮತ್ತು 20 ವರ್ಷ ಪೂರೈಸಿದ ‘ಪಿಂಗಾರ’ ವಾರ ಪತ್ರಿಕೆಯ ಸಹಯೋಗದಲ್ಲಿ ‘ಚಾರೊಳಿ’ 1000 ದ ಸಂಭ್ರಮ ನಗರದ ಬಜ್ಜೋಡಿಯ ಸಂದೇಶ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್‌ ಮಾತನಾಡಿ ‘ಚಾರೊಳಿ’ ಎಂದರೆ ನಾಲ್ಕು ಸಾಲುಗಳ ಸಾಹಿತ್ಯ. ಈ ನಾಲ್ಕು ಸಾಲುಗಳ ಸಾಹಿತ್ಯದಲ್ಲಿ ಎಲ್ಲಾ ವಿಷಯಗಳನ್ನು ಮನ ತಟ್ಟುವಂತೆ ಮಾಡುವ ಸಾಹಿತ್ಯ ಜನರ ಮನೆ ಮಾತಗಿದೆ ಎಂದರು.
ಮುಖ್ಯ ಅತಿಥಿಯಾಗಿದ್ದ ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹಾಗೂ ಕೊಂಕಣಿ ಅಕಾಡೆಮಿಯ ಮಾಜಿ ಅಧ್ಯಕ್ಷ ರೋಯ್‌ ಕ್ಯಾಸ್ಟಲಿನೊ ಅವರು ಶುಭ ಹಾರೈಸಿದರು. ಅತಿಥಿಗಳಾಗಿ ರಾಹುಲ್‌ ಜಾಹೀರಾತು ಸಂಸ್ಥೆಯ ಮಾಲಕ ಟೈಟಸ್‌ ನೊರೊನ್ಹಾ, ನವೀನ್ ನಾಯಕ್‌, ಫೋರ್‌ ವಿಂಡ್ಸ್ ಜಾಹೀರಾತು ಸಂಸ್ಥೆಯ ನಿರ್ದೇಶಕ ಎಲಿಯಾಸ್‌ ಫೆರ್ನಾಂಡಿಸ್‌ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕೊಂಕಣಿ ಹಾಗೂ ಇತರ ಭಾಷೆಗಳಲ್ಲಿ ಹಲವಾರು ಸಾಹಿತ್ಯ ಕೃತಿ ರಚಿಸಿದ ಕೊಂಕಣಿ ಕವಿ ರಿಚಾರ್ಡ್‌ ಲಸ್ರಾದೊ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕೇರಳ, ಗೋವಾ, ಆಂಧ್ರ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದ ಹಲವು ಮಂದಿ ಕವಿಗಳು ಹಾಗೂ ಚಾರೊಳಿಯಲ್ಲಿ ನಿಪುಣರಾದ ಸಾಹಿತಿಗಳು ಭಾಗವಹಿಸಿದ್ದರು.
ಅಖಿಲ ಭಾರತೀಯ ಕೊಂಕಣಿ ಚಾರೊಳಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಗೂ ಪಿಂಗಾರ ಪತ್ರಿಕೆಯ ಸಂಪಾದಕ ರೈಮಂಡ್ ಡಿ’ಕುನ್ಹಾ ಸ್ವಾಗತಿಸಿದರು. ರಿಯಾನಾ ಡಿ’ಕಿನ್ಹಾ ಮತ್ತು ಅರವಿಂದ ಶಾನುಬೋಗ್‌ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು