9:16 PM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ

28/07/2024, 18:53

ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್ ಶಾಲೆಯಲ್ಲಿ ಪೂರೈಸಿ, ಫ್ರೌಡಶಾಲೆಯಿಂದ ಪದವಿಯ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಕಲಿತು, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪದವಿ ಹಾಗೂ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಮಂಗಳೂರು, ಪುತ್ತೂರು ಮತ್ತು ಉಡುಪಿಯ ಕಲ್ಯಾಣ್ಪುರದ ಶಾಲೆಗಳಲ್ಲಿ ಶಿಕ್ಷಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಕ್ಷೇತ್ರದಿಂದ ಉದ್ಯಮ ರಂಗಕ್ಕೆ ಪಾದಾರ್ಪಣೆ ಮಾಡಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವಕ ಪುರಸ್ಕಾರವನ್ನು ಪಡೆದುಕೊಂಡ ಬೆಂಜಮಿನ್ ಡಿಸೋಜ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿಯಾಗಿ, ಭೂ ನ್ಯಾಯ ಮಂಡಲಿಯ ಸದಸ್ಯರಾಗಿ, ಬಜ್ಪೆ ಮಂಡಲ ಪಂಚಾಯತಿಯ ಪ್ರಧಾನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ಪಾಲನ ಪರಿಷತ್ತಿನಲ್ಲಿ ಮೂರು ಅವಧಿಗೆ ಸದಸ್ಯರಾಗಿ, ಕಥೊಲಿಕ ಸಭಾ ಸಂಘಟನೆಯ ಪ್ರಥಮ ಅಜೀವ ಸದಸ್ಯರಾಗಿ, ಧರ್ಮಕ್ಷೇತ್ರದಲ್ಲಿ ಗುರಿಕಾರ, ಪಾಲನ ಪರಿಷತ್ ಉಪಾಧ್ಯಕ್ಷ, ಉತ್ತಮ ಕಾರ್ಯಕ್ರಮ ನಿರ್ವಾಹಕರಾಗಿ ಗಣನೀಯ ಸೇವೆ ಸಲ್ಲಿಸಿದ್ದು, ಓರ್ವ ಗಾಯಕ ಮತ್ತು ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು