3:18 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಶಿಕ್ಷಕ, ಉದ್ಯಮಿ, ಸಾಮಾಜಿಕ ಧುರೀಣ ಬೆಂಜಮಿನ್ ಡಿಸೋಜ ಇನ್ನಿಲ್ಲ

28/07/2024, 18:53

ಮಂಗಳೂರು(reporterkarnataka.com): ಶಿಕ್ಷಣ, ಉದ್ಯಮ ಮತ್ತು ಸಮಾಜಸೇವೆಯಲ್ಲಿ ತನ್ನದೇ ಛಾಪು ಮೂಡಿಸಿರುವ ಕೆಲರಾಯ್‌ನ ಬೆಂಜಮಿನ್ ಡಿ ಸೋಜ( 75 ) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ದಿ। ಜೊನ್ ಮತ್ತು ದಿ।ಪಿಯಾದ್ ಡಿಸೋಜ ದಂಪತಿಯ 12 ಮಕ್ಕಳಲ್ಲಿ ಕೊನೆಯವರಾದ ಬೆಂಜಮಿನ್ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಕೆಲರಾಯ್ ಸಂತ ಜೋಕಿಮ್ ಶಾಲೆಯಲ್ಲಿ ಪೂರೈಸಿ, ಫ್ರೌಡಶಾಲೆಯಿಂದ ಪದವಿಯ ವರೆಗೆ ಮಂಗಳೂರಿನ ಸಂತ ಅಲೋಶಿಯಸ್ ಸಂಸ್ಥೆಯಲ್ಲಿ ಕಲಿತು, ಮಂಗಳೂರಿನ ಸರಕಾರಿ ಕಾಲೇಜಿನಲ್ಲಿ ಶಿಕ್ಷಣ ಪದವಿ ಹಾಗೂ ತಿರುಪತಿಯ ವೆಂಕಟೇಶ್ವರ ವಿಶ್ವವಿದ್ಯಾಲಯದಿಂದ ರಾಜಕೀಯ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಮಂಗಳೂರು, ಪುತ್ತೂರು ಮತ್ತು ಉಡುಪಿಯ ಕಲ್ಯಾಣ್ಪುರದ ಶಾಲೆಗಳಲ್ಲಿ ಶಿಕ್ಷಕರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದರು.
ಶಿಕ್ಷಣ ಕ್ಷೇತ್ರದಿಂದ ಉದ್ಯಮ ರಂಗಕ್ಕೆ ಪಾದಾರ್ಪಣೆ ಮಾಡಿ ವಿವಿಧ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವುದರ ಜೊತೆಗೆ ದಕ್ಷಿಣ ಕನ್ನಡ ಜಿಲ್ಲಾ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಅತ್ಯುತ್ತಮ ಸಮಾಜ ಸೇವಕ ಪುರಸ್ಕಾರವನ್ನು ಪಡೆದುಕೊಂಡ ಬೆಂಜಮಿನ್ ಡಿಸೋಜ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿಯಾಗಿ, ಭೂ ನ್ಯಾಯ ಮಂಡಲಿಯ ಸದಸ್ಯರಾಗಿ, ಬಜ್ಪೆ ಮಂಡಲ ಪಂಚಾಯತಿಯ ಪ್ರಧಾನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ಮಂಗಳೂರು ಧರ್ಮಪ್ರಾಂತ್ಯದ ಪಾಲನ ಪರಿಷತ್ತಿನಲ್ಲಿ ಮೂರು ಅವಧಿಗೆ ಸದಸ್ಯರಾಗಿ, ಕಥೊಲಿಕ ಸಭಾ ಸಂಘಟನೆಯ ಪ್ರಥಮ ಅಜೀವ ಸದಸ್ಯರಾಗಿ, ಧರ್ಮಕ್ಷೇತ್ರದಲ್ಲಿ ಗುರಿಕಾರ, ಪಾಲನ ಪರಿಷತ್ ಉಪಾಧ್ಯಕ್ಷ, ಉತ್ತಮ ಕಾರ್ಯಕ್ರಮ ನಿರ್ವಾಹಕರಾಗಿ ಗಣನೀಯ ಸೇವೆ ಸಲ್ಲಿಸಿದ್ದು, ಓರ್ವ ಗಾಯಕ ಮತ್ತು ಕ್ರೀಡಾಪಟುವಾಗಿಯೂ ಗುರುತಿಸಿಕೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು