7:33 PM Wednesday13 - May 2026
ಬ್ರೇಕಿಂಗ್ ನ್ಯೂಸ್
ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ… ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಶೇ. 1.50ರಷ್ಟು ಹೆಚ್ಚಳ: ಸರ್ಕಾರದ…

ಇತ್ತೀಚಿನ ಸುದ್ದಿ

ವಯನಾಡು: ಭಾರೀ ಭೂಕುಸಿತ, ಜಲ ಪ್ರವಾಹ; 4 ಗ್ರಾಮಗಳು ಸಂಪೂರ್ಣ ನಾಶ; ಕನಿಷ್ಠ 47 ಮಂದಿ ಸಾವು

30/07/2024, 17:47

ವಯನಾಡು(reporterkarnataka.com):‌ ನೆರೆಯ ಕೇರಳದ ವಯನಾಡಿನ ಮುಂಡಕ್ಕೈ ಮತ್ತು ಚುರಲ್ಮಲಾ ಪ್ರದೇಶದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, 4 ಗ್ರಾಮಗಳು ಅಕ್ಷರಶಃ ಸಂಪೂರ್ಣ ಮಣ್ಣಿನಡಿಗೆ ಸಿಲುಕಿವೆ. ದುರಂತದಲ್ಲಿ ಕನಿಷ್ಠ 47 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 250ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ.


ವಯನಾಡಿನಲ್ಲಿ ತಡರಾತ್ರಿ ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಮುಂಡಕ್ಕೈ, ಚುರಲ್ಮಲಾ, ಅಟ್ಟಮಾಲಾ, ನೂಲ್ಪುಝಾದಲ್ಲಿ ಭೂಕುಸಿತ ಹಾಗೂ ಪ್ರವಾಹದಲ್ಲಿ ಮನುಷ್ಯ ಹಾಗೂ ಜಾನುವಾರುಗಳ ಮೃತದೇಹಗಳು ತೇಲಿ ಹೋಗುತ್ತಿವೆ. ಸುಮಾರು 400ಕ್ಕೂ ಹೆಚ್ಚು ಮಂದಿ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಗಾಯಗೊಂಡ 50ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಚುರಲ್ಮಲಾ ಪ್ರದೇಶದಲ್ಲಿ ಸುಮಾರು 250 ಕುಟುಂಬಗಳಿವೆ‌. ರಾತ್ರಿ 2 ಗಂಟೆ ಸುಮಾರಿಗೆ ಇಲ್ಲಿ ಭೂ ಕುಸಿತ ಉಂಟಾಗಿದೆ. ಮುಂಡಕ್ಕೈ, ಚುರಲ್ಮಲಾ, ಅಟ್ಟಮಾಲಾ, ನೂಲ್ಪುಝಾದಲ್ಲಿ ರಾತ್ರಿ 1 ಗಂಟೆ ನಂತರ 4 ಬಾರಿ ಭೀಕರ ಭೂ ಕುಸಿತವಾಗಿದೆ. 4 ಗ್ರಾಮಗಳು ಅಕ್ಷರಶಃ ಸಂಪೂರ್ಣ ನಾಶವಾಗಿವೆ.
ವಯನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ರಕ್ಷಣಾ ಕಾರ್ಯಾಚರಣೆಗೆ ಆಗಮಿಸಿದ ಸೇನೆಯ ಹೆಲಿಕಾಪ್ಟರ್‌ಗಳು ಪ್ರತೀಕೂಲ ಹವಾಮಾನದಿಂದ ಲ್ಯಾಂಡ್ ಮಾಡಲಾಗದೆ ಹಿಂತಿರುಗಿವೆ. ಮುಂಡಕ್ಕೈ ಮದರಸಾ ಬಳಿ 150ಕ್ಕೂ ಹೆಚ್ಚು ಮಂದಿ ಸಿಲುಕಿಕೊಂಡಿದ್ದಾರೆ. ಇಲ್ಲಿ 50ಕ್ಕೂ ಹೆಚ್ಚು ಮನೆಗಳು ಮಣ್ಣಿನಡಿ ಸಿಲುಕಿವೆ.
ಚಾಲಿಯಾರ್​ ಎಂಬ ನದಿಗೆ ಅಡ್ಡಲಾಗಿದ್ದ ಸೇತುವೆ ನೆಲಸಮವಾಗಿದೆ.
ಪರಿಣಾಮ ಸಂಪರ್ಕ ಸಾಧಿಸುವುದು ಕಷ್ಟಕರವಾಗಿದೆ.
ನದಿಯಲ್ಲಿ ತೇಲಿಬಂದ ಶವಗಳು
ಪ್ರದೇಶದಲ್ಲಿ ಹರಿಯುವ ಚಾಲಿಯಾರ್​ ನದಿಯ ರಭಸ ಜೋರಾಗಿದೆ. ನೀರಿನ ರಭಸಕ್ಕೆ ಮರ, ಮನೆಗಳು ಕೊಚ್ಚಿ ಹೋಗಿವೆ. ಎನ್ ಡಿಆರ್ ಎಫ್ ತಂಡ ಶವಗಳನ್ನ ಮೇಲಕ್ಕೆತ್ತುವ ಕಾರ್ಯದಲ್ಲಿ ತೊಡಗಿವೆ.

ಇತ್ತೀಚಿನ ಸುದ್ದಿ

ಜಾಹೀರಾತು