3:49 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪ್ರಸಕ್ತ ಮುಂಗಾರು: ರಾಜ್ಯದಲ್ಲಿ ಭಾರೀ ಮಳೆಗೆ ಒಟ್ಟು 44 ಮಂದಿ ಸಾವು; 600 ಮನೆಗಳು ಸಂಪೂರ್ಣ ನಾಶ; 2632 ಹೆಕ್ಟೇರ್ ಬೆಳೆ ಹಾನಿ

30/07/2024, 20:04

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com
ರಾಜ್ಯದಲ್ಲಿ ಪ್ರಸಕ್ತ ಮುಂಗಾರಿನಲ್ಲಿ ಮಳೆ ಸಂಬಂಧಿಸಿದ ಅನಾಹುತದಲ್ಲಿ ಒಟ್ಟು 44 ಮಂದಿ ಪ್ರಾಣ ಕಳೆದುಕೊಂಡಿದ್ದು, 2632 ಹೆಕ್ಟೇರ್ ಬೆಳೆ ಹಾನಿಯಾಗಿದೆ.


ನೆರೆ, ಭೂಕುಸಿತ, ಮನೆ ನಾಶದಿಂದ ರಾಜ್ಯದ ವಿವಿಧೆಡೆಗಳಲ್ಲಿ ಈ ಸಾವು ಸಂಭವಿಸಿದೆ. ಕರಾವಳಿ,ಮಲೆನಾಡು ಹಾಗೂ ಮುಂಬೈ ಕರ್ನಾಟಕ ಪ್ರದೇಶದಲ್ಲಿ ಹೆಚ್ಚಿನ ಸಾವು ಸಂಭವಿಸಿದೆ. ಜುಲೈ ತಿಂಗಳಿನಲ್ಲಿ ರಾಜ್ಯದಲ್ಲಿ 371 ಎಂಎಂ ಮಳೆಯಾಗಿದೆ. 225 ಎಂಎಂ ಸಾಮಾನ್ಯ ಮಳೆಯಾಗಿದ್ದು, ಈ ಬಾರಿ ಅಧಿಕ ಮಳೆಯಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಜೂನ್ ಮತ್ತು ಜುಲೈ ತಿಂಗಳಿನಲ್ಲಿ ಮಳೆಗೆ ಸಂಬಂಧಿಸಿದಂತೆ ಒಟ್ಟು 44 ಮಂದಿ ಸಾವನ್ನಪ್ಪಿದ್ದಾರೆ. ಭೂಕುಸಿತ, ಮನೆ ನಾಶದಿಂದ ಈ ಸಾವು ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಸಮೀಪದ ಶಿರೂರಿನಲ್ಲಿ ಸಂಭವಿಸಿದ ಮಹಾ ದುರಂತ ಭೂಕುಸಿತ ಕೂಡ ಇದರಲ್ಲಿ ಸೇರಿದೆ.
ರಾಜ್ಯದಲ್ಲಿ ಒಟ್ಟು 600 ಮನೆಗಳು ಸಂಪೂರ್ಣ ನಾಶವಾಗಿದೆ. 4200 ಮನೆಗಳು ಭಾಗಶಃ ಹಾನಿಗೀಡಾಗಿವೆ. ಇದರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೇ 543 ಮನೆಗಳು ಸೇರಿವೆ. ನಂತರ ಉಡುಪಿ, ಹಾಸನ ಹಾಗೂ ಬೆಳಗಾವಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮನೆಗಳು ಹಾನಿಗೀಡಾಗಿವೆ. ಬೆಳಗಾವಿ, ಬಾಗಲಕೋಟೆ ಹಾಗೂ ಕಲಬುರಗಿಯಲ್ಲಿ ಸಾಕಷ್ಟು ಬೆಳೆ ಹಾನಿಗೀಡಾಗಿದೆ. ಕೃಷ್ಣಾ, ಘಟಪ್ರಭಾ ಹಾಗೂ ಭೀಮಾ ನದಿ ತೀರದ ಗ್ರಾಮಗಳ ಕೃಷಿಭೂಮಿಗೆ ಹಾನಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು