5:14 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ

30/07/2024, 21:41

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ನೀರು ಹೆಚ್ಚಾಗುವ
ಸಾಧ್ಯತೆ ಇದೆ.ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು ತಗ್ಗು ಪ್ರದೇಶದ ಮನೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶವಾದ ಸ್ಥಳಗಳಿಗೆ ಅಧಿಕಾರಿಗಳು ಕಳುಹಿಸಬೇಕಿದೆ.
*ತಲೆಕೆಳಗಾದ ಪ್ರತೀತಿ:*
ಪ್ರತಿಯೊಂದು ಬಾರಿ ಬಾಗಿನ ಬಿಟ್ಟ ನಂತರ ಮಳೆ ಕಡಿಮೆಯಾಗಿ ನದಿಯ ನೀರಿನ ಮಟ್ಟ ಕೂಡ ಕಡಿಮೆ ಆಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಬಾರಿ ಆ ಪ್ರತೀತಿ ತಲೆ ಕೆಳಗಾಗಿದೆ.ಅದರಲ್ಲೂ ಈ ಬಾರಿ ನಾಲ್ಕು ಬಾರಿ ತುಂಗಾ ನದಿಗೆ ಬಾಗಿನ ಅರ್ಪಿಸಲಾಗಿತ್ತು. ಆದರೂ ಬಾಗಿನ ಅರ್ಪಿಸಿದ ನಂತರ ರಾಮಮಂಟಪ ಮುಳುಗಿ ಹೊಸ ಇತಿಹಾಸ ಬರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು