2:57 PM Sunday21 - September 2025
ಬ್ರೇಕಿಂಗ್ ನ್ಯೂಸ್
ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ…

ಇತ್ತೀಚಿನ ಸುದ್ದಿ

ಪುಷ್ಯ ಮಳೆಯ ಅಬ್ಬರ: ಅಪಾಯ ಮಟ್ಟ ಮೀರಿ ಹರಿಯುತ್ತಿರುವ ತುಂಗಾ ನದಿ; 4 ಬಾರಿ ಬಾಗಿನ ಸಮರ್ಪಿಸಿದರೂ ರಾಮ ಮಂಟಪ ಮುಳುಗಡೆ

30/07/2024, 21:41

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.ಕಂ

ಪುಷ್ಯ ಮಳೆಯ ಅಬ್ಬರಕ್ಕೆ ತುಂಗಾನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದೆ. ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ ರಾಮಮಂಟಪ ಮುಳುಗಡೆ ಆಗಿದೆ.
ನಿರಂತರ ಸುರಿಯುತ್ತಿರುವ ಮಳೆಯಿಂದ ನೀರು ಹೆಚ್ಚಾಗುವ
ಸಾಧ್ಯತೆ ಇದೆ.ನದಿ ಪಾತ್ರದಲ್ಲಿ ವಾಸಿಸುವ ಜನರಿಗೆ ಈಗಾಗಲೇ ಮುನ್ನೆಚ್ಚರಿಕೆಯನ್ನು ನೀಡಲಾಗಿದ್ದು ತಗ್ಗು ಪ್ರದೇಶದ ಮನೆಗಳಲ್ಲಿ ವಾಸಿಸುವ ಜನರನ್ನು ಸುರಕ್ಷಿತ ಪ್ರದೇಶವಾದ ಸ್ಥಳಗಳಿಗೆ ಅಧಿಕಾರಿಗಳು ಕಳುಹಿಸಬೇಕಿದೆ.
*ತಲೆಕೆಳಗಾದ ಪ್ರತೀತಿ:*
ಪ್ರತಿಯೊಂದು ಬಾರಿ ಬಾಗಿನ ಬಿಟ್ಟ ನಂತರ ಮಳೆ ಕಡಿಮೆಯಾಗಿ ನದಿಯ ನೀರಿನ ಮಟ್ಟ ಕೂಡ ಕಡಿಮೆ ಆಗುತ್ತದೆ ಎಂಬ ಪ್ರತೀತಿ ಇದೆ. ಆದರೆ ಈ ಬಾರಿ ಆ ಪ್ರತೀತಿ ತಲೆ ಕೆಳಗಾಗಿದೆ.ಅದರಲ್ಲೂ ಈ ಬಾರಿ ನಾಲ್ಕು ಬಾರಿ ತುಂಗಾ ನದಿಗೆ ಬಾಗಿನ ಅರ್ಪಿಸಲಾಗಿತ್ತು. ಆದರೂ ಬಾಗಿನ ಅರ್ಪಿಸಿದ ನಂತರ ರಾಮಮಂಟಪ ಮುಳುಗಿ ಹೊಸ ಇತಿಹಾಸ ಬರೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು