3:01 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಗರ ಬಡಿದಿರುವ ಗ್ರಾಪಂ: ಗಜಾಪುರದಲ್ಲಿ ರಸ್ತೆಯಲ್ಲೇ  ಹರಿಯುವ ಗಟಾರ ನೀರು; ಎಲ್ಲೆಂದರಲ್ಲಿ ಕಸದ ರಾಶಿ !

25/08/2021, 08:52

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಎತ್ತ ನೋಡಿದರತ್ತ ಗಲೀಜು ನೀರಿನ ಗುಂಡಿ, ಕಸದ ರಾಶಿ, ರಸ್ತೆಯಲ್ಲೇ ಹರಿಯುವ ಬಚ್ಚಲು ನೀರು. ಒಟ್ಟಿನಲ್ಲಿ ಕೊಚ್ಚೆಯ ವಿಶ್ವರೂಪ ದರ್ಶನ…


ಇದು ವಿಜಯನಗರ ಜಿಲ್ಲೆಯ ಕಂದಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಜಾಪುರ ಗ್ರಾಮದ ಒಂದು ಸಣ್ಣ ಝಳಕ್.ಇಲ್ಲಿ ಎಲ್ಲಿ ನೋಡಿದರೂ ಕೊಚ್ಚೆ ಗಲೀಜು, ಕಸದ ರಾಶಿಯೇ ರಾಶಿ.
ಪರಿಣಾಮ ಗ್ರಾಮದಲ್ಲಿ ಸಾಂಕ್ರಾಮಿಕ ರೋಗಗಳದ್ದೇ ದರ್ಬಾರು ಎನ್ನುತ್ತಾರೆ ಹೋರಾಟಗಾರ ಕೊಟ್ರೇಶ ಅವರು. ಗ್ರಾಪಂ ಅಧಿಕಾರಿಯ ನಿರ್ಲಕ್ಷ್ಯ ಧೋರಣೆಯೇ ಇದಕ್ಕೆ ಕಾರಣ ಎಂದು ಅವರು ದೂರುತ್ತಾರೆ.

ಗ್ರಾಮದಲ್ಲಿ ಎಲ್ಲೆಂದರಲ್ಲಿ ಬಚ್ಚಲು ಮನೆಯ ನೀರು ರಸ್ತೆಯಲ್ಲಿ ಹರಿದಾಡುತ್ತದೆ. ಗಲ್ಲಿ ಗಲ್ಲಿ ಗಳಲ್ಲಿ ನೀರು, ಕಸ ತುಂಬಿದ ಗುಂಡಿಗಳು ನಿರ್ಮಾಣವಾಗಿವೆ. ಗಜಾಪುರದ ಗಲ್ಲಿಗಳು ನೈರ್ಮಲ್ಯ ಕಾಣದೆ ಗಲೀಜು ಎಲ್ಲೆಂದರಲ್ಲಿ ಕಾಣುತ್ತಿದೆ. ಪರಿಣಾಮ ಬಹುತೇಕ ಗ್ರಾಮಸ್ಥರು ಹಲವು ತಿಂಗಳುಗಳಿಂದ ನಿರಂತರ ಅನಾರೋಗ್ಯಕ್ಕೀಡಗುತ್ತಿದ್ದಾರೆ. ರೈತ ಕಾರ್ಮಿಕರೇ ಹೆಚ್ಚಿರುವ ಗ್ರಾಮದಲ್ಲಿ ರೋಗಗಳು ತಾಂಡವಾಡುತ್ತಿರುವುದರಿಂದಾಗಿ ಅವರು ಆರ್ಥಿಕ ಸಂಕಷ್ಟ ಅನುಭವುಸುವಂತಾಗಿದೆ. ಕೂಲಿ ನಾಲಿ ಮಾಡಿ ದುಡಿದು ಜೀವನ ಸಾಗಿಸುವ ಗ್ರಾಮಸ್ಥರು ಆಸ್ಪತ್ರೆ ಹಾಗೂ ಮೆಡಿಕಲ್ ಸ್ಟೋರ್ ಗಳಿಗೆ ತಮ್ಮ ಬೆವರಿನ ಹಣ ವ್ಯಯ ಮಾಡೋದು ಸಾಮಾನ್ಯವಾಗಿದೆ.

ವರ್ಷಕ್ಕೊಮ್ಮೆ ಜರುಗುವ  ಗ್ರಾಮದ ಹಬ್ಬಕ್ಕೆ ಮಾತ್ರ ಕಸ ತೆಗೆಯೋದು ಇಲ್ಲಿ ಸಂಪ್ರದಾಯ. ಗ್ರಾಮ ಸ್ವಚ್ಛವಾಗೋದು ಅಲ್ಲಿವರೆಗೆ ಕಸದ ರಾಶಿ ಗುಂಡಿಗಳು ಕಾಣುತ್ತಿರುತ್ತವೆ. ಬಹುತೇಕ ಕಡೆಗಳಲ್ಲ ಚರಂಡಿ ನಿರ್ಮಾಣವಾಗಬೇಕಿದೆ. ಹಲವೆಡೆಗಳಲ್ಲಿ ಹೂಳು ಹಾಗೂ ಕಸ ತುಂಬಿ ಮುಚ್ಚಿರುವ ಚರಂಡಿಗಳನ್ನು ಸ್ವಚ್ಚಗೊಳಿಸಬೇಕಿದೆ ಎನ್ನುತ್ತಾರೆ ಗ್ರಾಮಸ್ಥರು.

ಗ್ರಾಪಂ ಸದಸ್ಯರು ಮುಗ್ದರಿದ್ದು ಅವರೂ ಸಾಕಷ್ಟು ಭಾರಿ ಗ್ರಾಪಂ ಅಧಿಕಾರಿಗೆ ನೈರ್ಮಲ್ಯತೆ ಕಾಪಾಡುವಂತೆ ಸೂಚಿದ್ದಾರಾದರೂ,

ಗ್ರಾಪಂ ಅಧಿಕಾರಿ ಅವರಿಗೆ ಕಾಗ್ಗಕ್ಕ ಗುಬ್ಬಕ್ಕನ ಕಥೆ ಕಟ್ಟಿ ಜಾರಿಕೊಳ್ಳುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ವರ್ಷಕ್ಕೊಮ್ಮೆ ಮಾತ್ರ ಚರಂಡಿಗಳ ಕಸ ತೆಗೆಯುವುದು ಪರಿಣಾಮ ನಿಂತ ನೀರಲ್ಲಿ ಕಸ ಕೊಳೆತು ಚರಂಡಿಗಳು ದುರ್ನಾತ ಬೀರುತ್ತಿವೆ. 

ಚರಂಡಿಗಳು ಸೊಳ್ಳೆ, ಕ್ರಿಮಿಗಳ ವಾಸ ಸ್ಥಾನವಾಗಿವೆ. ಇದರಿಂದಾಗಿ ತಮಗೆ ಆಸ್ಪತ್ರೆಗೆ ಅಲೆಯೋ ವನವಾಸ ತಪ್ಪುವುದಿಲ್ಲ.ಎಂದು ಅಳಲು ತೋಡಿಕೊಂಡಿದ್ದಾರೆ ಗಜಾಪುರ ಗ್ರಾಮಸ್ಥರು. ಸಂಬಂಧಿಸಿದಂತೆ ತಾಪಂ ಅಧಿಕಾರಿಗಳು ಶೀಘ್ರವೇ ಸ್ಥಳಕ್ಕೆ ಭೇಟಿ ನೀಡಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಿದೆ.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪರಿಸ್ಥಿತಿ ಅವಲೋಕಿಸಿ ನಿರ್ಲಕ್ಷ್ಯ ಧೊರಣೆಯ ಗ್ರಾಪಂ ಅಭಿವೃದ್ಧಿ ಅಧಿಕಾರಿಯನ್ನ ಶೀಘ್ರವೇ ಬದಲಿಸಬೇಕೆಂದು ಗ್ರಾಮಸ್ಥರು ಹಾಗೂ ವಿವಿದ ಸಂಘಟನೆಗಳ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು