11:42 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ವಯನಾಡು ಮಳೆ ಎಫೆಕ್ಟ್: ಅಪಾಯದ ಅಂಚಿನಲ್ಲಿ ನಂಜನಗೂಡು: ಮತ್ತೆ ಜಲ ದಿಗ್ಬಂಧನ ಎದುರಿಸುತ್ತಿರುವ ಶ್ರೀಕಂಠ

31/07/2024, 15:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕಬಿನಿ ನದಿ ಪಾತ್ರವಾದ ಕೇರಳ ವಯನಾಡಿನಲ್ಲಿ ಮಳೆಯ ರುದ್ರ ನರ್ತನದಿಂದಾಗಿ ಕಪಿಲಾ ನದಿಯು ಉಕ್ಕಿ ಹರಿಯುತ್ತಿರುವ ಪರಿಣಾಮ ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನದಿಯು ಸಾಗರೋಪಾದಿಯಲ್ಲಿ ತುಂಬಿ ಹರಿಯುತ್ತಿದೆ. ಪಟ್ಟಣದ ಮಲ್ಲನ ಮೂಲೆ ಮಠದ ಬಳಿ ಮೈಸೂರು ನಂಜನಗೂಡು ಹೆದ್ದಾರಿ ರಸ್ತೆಯು ಮುಳುಗಡೆಯಾಗಿರುವುದರಿಂದ ಸಂಚಾರ ಬಂದ್ ಮಾಡಿ ಬದಲಿ ರಸ್ತೆ ಸಂಚಾರ ಕಲ್ಪಿಸಲಾಗಿದೆ. ಇದರಿಂದಾಗಿ ಸಂಚಾರ ಹಸ್ತವ್ಯಸ್ತಗೊಂಡಿದೆ.
ಕಪಿಲಾ ನದಿ ಪ್ರವಾಹದಿಂದಾಗಿ ಮಲ್ಲನಮೂಲೆ ಮಠವೂ ಸೇರಿದಂತೆ ಕಪಿಲಾ ನದಿ ತೀರದಲ್ಲಿರುವ ಶ್ರೀ ಬಸವೇಶ್ವರ, ಲಿಂಗಭಟರ ಗುಡಿ, ಕಾಶಿ ವಿಶ್ವನಾಥ ಸ್ವಾಮಿ ದೇವಾಲಯ, ಚಾಮುಂಡೇಶ್ವರಿ, ಅಯ್ಯಪ್ಪ ಸ್ವಾಮಿ, ದತ್ತಾತ್ರೇಯ ಸ್ವಾಮಿ, ಹಾಗೂ ಪರಶುರಾಮ ದೇವಾಲಯಗಳು ಸಂಪೂರ್ಣ ಜಲಾವೃತಗೊಂಡಿವೆ.


ಅಲ್ಲದೆ ಐತಿಹಾಸಿಕ 16 ಕಾಲು ಮಂಟಪ ಮತ್ತು ಹಳೆಯ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ.
ಇನ್ನು ತಗ್ಗು ಪ್ರದೇಶದ ಸಾವಿರಾರು ಎಕರೆ ಜಮೀನುಗಳು ಸ್ಮಶಾನಗಳು ಕೂಡ ನದಿ ಪ್ರವಾಹದಿಂದ ಮುಳುಗಡೆಯಾಗಿವೆ. ದೇವಾಲಯದ ಸುತ್ತಮುತ್ತ ಮುಡಿಕಟ್ಟೆ, ಸೋಪಾನಕಟ್ಟೆ, ದಾಸೋಹ ಭವನ ಸೇರಿದಂತೆ ದೇವಸ್ಥಾನದ ಪಾರ್ಕಿಂಗ್ ಮತ್ತು ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ನೂತನ ಶ್ರೀಕಂಠೇಶ್ವರ ಮಂಗಳಮಂಟಪ ಕಲ್ಯಾಣ ಮಂಟಪ ಮತ್ತು ಹಳ್ಳದ ಕೇರಿಯಲ್ಲಿ ಕೆಲವು ವಾಸದ ಮನೆಗಳು ಕೂಡ ಜಲಾವೃತಗೊಂಡಿವೆ.
ವಯನಾಡುವಿನಲ್ಲಿ ಇದೇ ಪರಿಸ್ಥಿತಿ ಮುಂದುವರೆದರೆ ನಂಜನಗೂಡು ಪಟ್ಟಣಕ್ಕೂ ನೀರು ನುಗ್ಗುವ ಭೀತಿ ಎದುರಾಗಲಿದೆ. ಪ್ರವಾಹದ ಮುನ್ನೆಚ್ಚರಿಕೆಯಿಂದ ನಂಜನಗೂಡು ತಾಲೂಕು ಆಡಳಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಎಲ್ಲ ಮುಂಜಾಗ್ರತ ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು